ಅಕ್ರಮ ಗೋಮಾಂಸ ಸಾಗಾಟ: ಇಬ್ಬರ ಬಂಧನ

16 ಕೆ.ಜಿ ಗೋಮಾಂಸ ವಶಕ್ಕೆ
ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ

ಶಿರಸಿ: ಅಕ್ರಮವಾಗಿ ಗೋಮಾಂಸವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಇಬ್ಬರನ್ನ ಬಂಧಿಸಿರುವ ಘಟನೆ ಶಿರಸಿ ಹೊಸಮಾರುಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ಕಿ ಆಲೂರು ಮೂಲದ ಮಹ್ಮದ್ ಸಲಿಂ ಬೇಪಾರಿ, ಭಾಷಾಸಾಬ ಬಹದ್ದೂರ್ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಗೊಮಾಂಸವನ್ನು ಮಾರಾಟ ಮಾಡಲು ಶಿರಸಿ ನಗರದ ಕರಿಗುಂಡಿ ರಸ್ತೆಯಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇಲೆ ಡಿವೈಎಸ್ಪಿ ಜಿ ಟಿ ನಾಯಕ ನೇತೃತ್ವದಲ್ಲಿ ತಂಡ ಬಂಧಿಸಿದೆ.

ಬಂಧಿತರಿoದ 16 ಕೆ.ಜಿ ಗೋಮಾಂಸ, ನಗದು, ಎರಡು ಮೊಬೈಲ್ , ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version