![](http://i0.wp.com/vismaya24x7.com/wp-content/uploads/2020/10/bhatkal.jpg?fit=694%2C804&ssl=1)
ಭಟ್ಕಳ: ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಲೂರಿನ ರೇಲ್ವೇ ಹಳಿ ಬಳಿ ನಡೆದಿದೆ. ಗಾಯಗೊಂಡ ಲಾರಿ ಚಾಲಕನನ್ನು ಕ್ರೀಪಾಲ್ ಸಿಂಗ್ (30) ವಡಾಲ ಗುಜರಾತ ಎಂದು ಗುರುತಿಸಲಾಗಿದೆ.
ಈತ ಕೊಂಕಣ ರೇಲ್ವೆಯ ರೋರೋ ರೈಲಿನಲ್ಲಿ ಸರಕು ತುಂಬಿದ ಲಾರಿ ಚಾಲಕನಾಗಿದ್ದು, ಗುಜರಾತಿನಿಂದ ಸುರತ್ಕಲ್ ಗೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ರೈಲಿನಿಂದ ನೆಲಕ್ಕುರುಳಿ ಬಿದ್ದಿದ್ದಾನೆ.
ಇದರ ಪರಿಣಾಮ ಈತನ ತಲೆಗೆ ಗಂಭೀರ ಗಾಯವಾಗಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರುಡೇಶ್ವರ ಪಿ.ಎಸ್.ಐ. ಸಿ.ಆರ್. ಪುಟ್ಟಸ್ವಾಮಿ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
- ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ