ಬಂದರು ಅಭಿವೃದ್ಧಿ ಕಾಮಗಾರಿ ಪರಿಶೀಲನೆ : ಶಾಸಕ ಸುನೀಲ್ ನಾಯ್ಕ ಸಾಥ್

ಭಟ್ಕಳ : ತಾಲೂಕಿನ ಮೀನುಗಾರರ ಬೇಡಿಕೆಯಂತೆ ಸರ್ಕಾರದ ಮುಜರಾಯಿ ಇಲಾಖೆ ಮತ್ತು ಬಂದರು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕ ಸುನೀಲ್ ನಾಯ್ಕ ತಾಲೂಕಿನ ಅಳ್ವೆಕೋಡಿ, ತೆಂಗಿನಗುಂಡಿ ಹಾಗೂ ಭಟ್ಕಳ ಬಂದರುಗಳಿಗೆ ಬೇಟಿ ನೀಡಿ ಬಂದರು ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.


86 ಕೋಟಿ ರೂಪಾಯಿ ವೆಚ್ಚದಲ್ಲಿ ಅಳ್ವೆಕೋಡಿ ಬಂದರ್ ನ ಬ್ರೇಕ್ ವಾಟರ್ ಕಾಮಗಾರಿಯು ತೀರಾ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಮಾನ್ಯ ಸಚಿವರಿಗೆ ಮನವರಿಕೆ ಮಾಡಲಾಯಿತು, ತಕ್ಷಣ ಸ್ಪಂದಿಸಿದ ಸಚಿವರು ಸಂಭಂದಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕಾಮಗಾರಿಗೆ ಚುರುಕು ಮುಟ್ಟಿಸುವಂತೆ ತಾಕೀತು ಮಾಡಿದರು.


ಇನ್ನುಳಿದಂತೆ ತೆಂಗಿನಗುಂಡಿ ಬಂದರ್ ನ ವಿಸ್ತರಣೆ ಹಾಗೂ ಭಟ್ಕಳ ಬಂದರ್ ನ ಡ್ರೆಜಿಂಗ್ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನೆರವೇರಿಸಿಕೊಡುವಂತೆ ಹಾಗೂ ಮೀನುಗಾರರು ಅನಭವಿಸುತ್ತಿರುವ ತೊಂದರೆಗಳನ್ನು ಸನ್ಮಾನ್ಯ ಸಚಿವರಿಗೆ ಮನವರಿಕೆ ಮಾಡಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಕಾರ್ಯರೂಪಕ್ಕೆ ತರುವ ಭರವಸೆಯನ್ನು ನೀಡಿದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version