Uttara Kannada
Trending

ಚರಂಡಿಯಲ್ಲಿ ಬಿದ್ದ ಕಾರು: ನೀರಲ್ಲಿ ಮುಳುಗಿ ಸ್ಥಳದಲ್ಲೇ ಇಬ್ಬರ ಸಾವು

ಕಾರವಾರದ ಲಂಡನ್ ಬ್ರಿಡ್ಜ್ ಬಳಿ ದುರ್ಘಟನೆ
ಕಾರಿನಲ್ಲಿದ್ದ ಮತ್ತಿಬ್ಬರ ರಕ್ಷಣೆ

ಕಾರವಾರ: ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರೊಂದು ಚರಂಡಿಗೆ ಬಿದ್ದ ಘಟನೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ. ಅಂಕೋಲಾದಿಂದ ಗೋವಾ ಕಡೆ ತೆರಳುತ್ತಿದ್ದ ಕಾರೊಂದು ನಿನ್ನೆ ತಡರಾತ್ರಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಂಕೋಲಾದಿಂದ ಗೋವಾ ಕಡೆ ತೆರಳುತ್ತಿದ್ದವರುವಾಗ ಲಂಡನ್ ಬ್ರಿಡ್ಜ್ ಬಳಿಯ ಪೆಟ್ರೋಲ್ ಬಂಕ್​ಗೆ ತೆರಳಿ ಮರಳಿ ಬರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಕಾರು ಎದೆಮಟ್ಟದ ನೀರಿನಲ್ಲಿ ಮುಳುಗಿದ ಪರಿಣಾಮ ಮೇಲೆ ಬರಲಾಗದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನಿಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚರಂಡಿಗೆ ಬಿದ್ದ ಕಾರಿನಲ್ಲಿದ್ದ ಚಿಕ್ಕಮಗಳೂರು ಮೂಲದ ಕಿರಣ್ ಹಾಗೂ ರಾಕೇಶ್ ಸಿ. ಆರ್ ಘಟನೆಯಲ್ಲಿ ದುರ್ಮರಣ ಹೊಂದಿದ್ದಾರೆ. ಗಾಯಗೊಂಡಿದ್ದ ಮತ್ತಿಬ್ಬರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ 4 ಜನ ಪ್ರಯಾಣ ಮಾಡುತ್ತಿದ್ದು, ಮೃತರನ್ನು ಚಿಕ್ಕಮಗಳೂರಿನ ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮತ್ತಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button