
ಹೊನ್ನಾವರ: ತಾಲೂಕಿನಲ್ಲಿ ಇತ್ತಿಚೆಗೆ ಕಳ್ಳತನ ಪ್ರಕರಣ ಹೆಚ್ಚುತ್ತಿದೆ. ಭಟ್ಕಳ, ಅಂಕೋಲಾ, ಕುಮಟಾ, ಹೊನ್ನಾವರ ಸೇರಿದಂತೆ ಹಲವೆಡೆ ಕಳ್ಳರು ತಮ್ಮ ಕೈಚಳಕ ತೋರುತ್ತಲೇ ಇದ್ದಾರೆ. ಈಗ ಹೊನ್ನಾವರ ತಾಲೂಕಿನ ಕಾಸರಕೋಡದ ದೇವಸ್ಥಾನವೊಂದರ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ದೇವರ ಕೊರಳಿನಲ್ಲಿದ್ದ ಸರವನ್ನೇ ಕದ್ದೊಯ್ದಿದ್ದಾರೆ.
ಹೌದು, ತಾಲೂಕಿನ ಕಾಸರಕೋಡ ಹಿರೆಮಠ ವೀರ ಮಾರುತಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯ ಅಂದಾಜು 7 ಸಾವಿರ ನಗದು, ದೇವರ ಕೊರಳಿನ 20 ಗ್ರಾಂ ತೂಕದ 80 ಸಾವಿರ ಮೌಲ್ಯದ ಬಂಗಾರದ ಸರವು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪಿಎಸೈ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಏನಾಯ್ತು ನೋಡಿ?
- ಐಐಐಟಿ ಪುಣೆಗೆ ಆಯ್ಕೆಯಾದ ಸಿದ್ಧಾರ್ಥ ಪಿಯು ಕಾಲೇಜಿನ ವಿದ್ಯಾರ್ಥಿ
- ಆಸ್ಪತ್ರೆಯಲ್ಲಿದ್ದುಕೊಂಡೆ ಮಂಚದ ವಿಷಯದಲ್ಲಿ ಲಂಚ ಕೇಳಲು ಹೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸರ್ಜನ್ : ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ
- ಪ್ರಥಮ ಪಿ ಯು ವಿದ್ಯಾರ್ಥಿ ನೇಣಿಗೆ ಶರಣು : ತರಗತಿ ಮುಗಿಸಿ ಮನೆಗೆ ಹೋಗುವಾಗ ಕ್ಲಾಸ್ ರೂಂ ಬೀಗ ಹಾಕಲು ಸಹಕರಿಸಿದವ, ಮತ್ತೆ ಕಾಲೇಜ ಮೆಟ್ಟಿಲು ಹತ್ತಲಾಗಲೇ ಇಲ್ಲ ?
- ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ