
ಅನಾಹುತ ತಪ್ಪಿಸಿದ ಪೊಲೀಸರು
ದರೋಡೆಗಾಗಿ ರಸ್ತೆಯಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು
ಗೋಕರ್ಣ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೋಗುವ ವಾಹನಗಳನ್ನು ತಡೆದು ದರೋಡೆ ಮಾಡಲು ಸಂಚು ರೂಪಿಸಿದ್ದ ಐವರು ಆರೋಪಿಗಳಲ್ಲಿ ಮೂವರನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮತ್ತಿಬ್ಬರು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳಿಂದ 4.12 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಟ್ಕುಳಿ ಬಳಿ ಲಾರಿಗಳನ್ನು ಅಡ್ಡಗಟ್ಟಲು ಯೋಜನೆ ರೂಪಿಸಿದ್ದರು. ಕಾರಿನಲ್ಲಿ ಬಂದಿದ್ದ ಅವರು, ಮಾರಕಾಸ್ತ್ರ, ಖಾರದ ಪುಡಿ ಮುಂತಾದ ವಸ್ತುಗಳನ್ನು ಇಟ್ಟುಕೊಂಡಿದ್ದರು. ಈ ಸಂದರ್ಭದಲ್ಲೇ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.
ಆರೋಪಿಗಳು ರಾಜ್ಯದ ಹಲವೆಡೆ ಹೆದ್ದಾರಿಯಲ್ಲಿ ದರೋಡೆ, ಮನೆಗಳಲ್ಲಿ ಕಳವು, ವಾಹನ ಕಳವು, ಸುಲಿಗೆ, ಡಕಾಯತಿ ಮುಂತಾದ್ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗೋಕರ್ಣ ಪಿ.ಎಸ್.ಐ ನವೀನ್ ನಾಯ್ಕ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಲಿಂಗತ್ವ ಅಲ್ಪಸಂಖ್ಯಾತರ ನೂತನ ಅಂತರoಗ ಸಂಘ ಉದ್ಘಾಟನೆ
- ನಿಲ್ಲಿಸಿಟ್ಟಿದ್ದ ಬೈಕುಗಳಿಗೆ ಓಮಿನಿ ಡಿಕ್ಕಿ: ಓರ್ವನಿಗೆ ಗಾಯ: ಮೂರು ಬೈಕ್ ಜಖಂ
- ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಸಂಪೂರ್ಣ ವಿಫಲ- ರವೀಂದ್ರ ನಾಯ್ಕ.
- ಮನೆಯ ಛಾವಣಿಯಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ: ಡ್ಯೂಟಿಗೆ ತಡವಾಗಿ ಬರುತ್ತೇನೆಂದವನು ಸಾವಿಗೆ ಶರಣಾದ
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,