![](http://i0.wp.com/vismaya24x7.com/wp-content/uploads/2020/11/btk-1.jpg?fit=640%2C352&ssl=1)
ಕಟ್ಟಿಗೆ ತುಂಬುವ ಕೋಣೆಯಲ್ಲಿ ಆತ್ಮಹತ್ಯೆ
ಅತಿಯಾದ ಸಾಲವೇ ಜೀವಕ್ಕೆ ಮುಳುವಾಯ್ತು
ಭಟ್ಕಳ: ಸಾಲಬಾಧೆ ತಾಳಲಾರದೆ ವ್ಯಕ್ತಿಯೊರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೆಬಲೆ ಪಂಚಾಯಿತಿ ವ್ಯಾಪ್ತಿಯ ಹೊನ್ನಿಗದ್ದೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಹೊನ್ನಿಗದ್ದೆ ನಿವಾಸಿ ಮಂಜುನಾಥ ಮಂಜಪ್ಪ ಮೊಗೇರ ಎಂದು ತಿಳಿದುಬಂದಿದೆ.
ಇವರು ತನ್ನ ಆರು ಜನ ಹೆಣ್ಣುಮಕ್ಕಳಿಗೆ ಮದುವೆ ಮಾಡಿ ಅತೀವ ಸಾಲದಲ್ಲಿದ್ದರು. ಲಾಕ್ಡೌನ್ ಹಿನ್ನಲೆಯಲ್ಲಿ ಮತ್ತಷ್ಟು ಸಂಕಷ್ಟ ಅನುಭವಿಸಿದ್ದರು ಎನ್ನಲಾಗಿದೆ. ಸಾಲಬಾಧೆ ತಾಳಲಾರದೆ ತನ್ನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಪಕ್ಕದ ಕಟ್ಟಿಗೆ ತುಂಬುವ ಕೋಣೆಯಲ್ಲಿನ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಮೃತರ ಪುತ್ರ ದಿವಾಕರ ಮಂಜುನಾಥ ಮೊಗೇರ ದೂರು ದಾಖಲಿಸಿದ್ದಾರೆ. ಎಎಸ್ಐ ಕೃಷ್ಣಾನಂದ ಸಿ ನಾಯ್ಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.