Uttara Kannada
Trending

ಗದ್ದೆ ಉಳುಮೆ ಮಾಡಬೇಕಾದರೆ ಮಷಿನಿಗೆ ಸಿಲುಕಿ ಕೃಷಿಕ ಸಾವು

ಕುಮಟಾ: ಕೃಷಿ ಮಷಿನ್ ಗಳನ್ನು ಹೊಲ-ಗದ್ದೆಗಳಲ್ಲಿ ಅತ್ಯಂತ ಜಾಗರೂಕವಾಗಿ ಉಪಯೋಗಿಸಬೇಕಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಇವು ಪ್ರಾಣವನ್ನೇ ತೆಗೆಯಬಲ್ಲವು. ಹೌದು, ಉಳುಮೆ ಮಾಡುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಷಿನಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವನ್ನಳ್ಳಿಯಲ್ಲಿ ನಡೆದಿದೆ. ಗದ್ದೆ ಉಳುಮೆ ಮಾಡುವ ಸಂದರ್ಭದಲ್ಲಿ ವ್ಯಕ್ತಿಯೋರ್ವ ಮಷಿನಿಗೆ ಸಿಕ್ಕಿ ಪ್ರಾಣ ಕಳೆದುಕೊಂಡಿದ್ದಾನೆ.

ಮೃತ ವ್ಯಕ್ತಿ ಮಂಜುನಾಥ ಹನುಮಂತ ನಾಯ್ಕ ಎಂದು ತಿಳಿದುಬಂದಿದ್ದು, ತಾಲೂಕಿ ಕಡ್ಲೆಯ ನಿವಾಸಿ ಎನ್ನಲಾಗಿದೆ. ಕಡ್ಲೆಯಿಂದ ವನಳ್ಳಿಯಲ್ಲಿಯಲ್ಲಿರುವ ತನ್ನ ಸಂಭoದಿಕರ ಮನೆಗೆ ಗದ್ದೆ ಉಳುಮೆಗೆ ಬಂದಾಗ ಆಯತಪ್ಪಿ ಮಷಿನಿಗೆ ಸಿಲುಕಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆ ಸಾಗಿಸುವ ಸಂಧರ್ಭದಲ್ಲಿ ಪ್ರಾಣ ಬಿಟ್ಟಿರುವುದಾಗಿ ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button