ಮುರ್ಡೇಶ್ವರದಲ್ಲಿ ದೇವರ ದರ್ಶನ ಪಡೆದು ಸಮುದ್ರಕ್ಕೆ ಈಜಲು ತೆರಳಿದವ ಸಾವು

ಭಟ್ಕಳ : ಪ್ರವಾಸಕ್ಕೆಂದು ಬಂದು ಸಮುದ್ರದ ನೀರಿನ ಸೆಳೆತಕ್ಕೆ ಒಳಗಾಗಿ ಈಜಾಡಲು ತೆರಳಿದ ವ್ಯಕ್ತಿಯೊರ್ವ ಸಮುದ್ರದಲ್ಲಿ ಮುಳುಗಿ ಸಾವನ್ನಪಿರುವ ಘಟನೆ ಮುರ್ಡೇಶ್ವರ ಕಡಲ ತೀರದಲಿ ರವಿವಾರ ನಡೆದಿದೆ. ಮೃತ ವ್ಯಕ್ತಿ ಬೆಂಗಳೂರಿನ ಬಾಣಸಂದ್ರಿಯ ನಿವಾಸಿ ಮಂಜುನಾಥ ಮಡಿವಾಳ (20) ಎಂದು ತಿಳಿದು ಬಂದಿದೆ. ಈತ ತನ್ನ 8 ಜನ ಸ್ನೇಹಿತರೊಂದಿಗೆ ಬೆಂಗಳೂರಿನಿoದ ಮುರುಡೇಶ್ವರಕ್ಕೆ ರವಿವಾರ ಬಂದಿದ್ದು, ದೇವರ ದರ್ಶನ ಪಡೆದು ತನ್ನ ಸ್ನೇಹಿತರೊಂದಿಗೆ ಮುರುಡೇಶ್ವರ ಕಡಲ ತೀರಕ್ಕೆ ಈಜಾಡಲು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಮಂಜುನಾಥ ಮಡಿವಾಳ ಅಪಾಯಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಕುರಿತು ಮುರುಡೇಶ್ವ ಪೋಲಿಸ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ
ಶ್ರೀ ಸಂಕಷ್ಟಹರ ಮಹಾಗಣಪತಿ ಜ್ಯೋತಿಷ್ಯ ಕೇಂದ್ರ: 9606187089
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version