
ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರ ಹೋಗಿ ಬರುತ್ತೇನೆ ಎಂದಿದ್ದ ಗ್ರಾಮಲೆಕ್ಕಾಧಿಕಾರಿಯೊಬ್ಬರು ಮನೆಗೆ ಮರಳದೆ ನಾಪತ್ತೆಯಾದ ಘಟನೆ ಭಟ್ಕಳದಲ್ಲಿ ನಡೆದಿದೆ. ಈ ಸಂಬAಧ ಅವರ ಪತ್ನಿ ಮುರ್ಡೇಶ್ವರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ಬೆಳಗಾವಿಯ ಸಹ್ಯಾದ್ರಿನಗರದ ನಿವಾಸಿ, ಪ್ರಸ್ತುತ ಭಟ್ಕಳ ತಾಲೂಕಿನ ಮುರ್ಡೇಶ್ವರದ ದಿವಗೇರಿಯಲ್ಲಿ ವಾಸಿಸುತ್ತಿರುವ, ಬೈಲೂರು ಗ್ರಾ.ಪಂ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ(32) ನಾಪತ್ತೆಯಾದ ವ್ಯಕ್ತಿ.
ಇವರು ಗುರುವಾರ ಗೆಳೆಯರೊಂದಿಗೆ ಹೊನ್ನಾವರ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ನಂತರ ರಾತ್ರಿಯೂ ಕರೆ ಮಾಡಿ ನಾನು ರಾತ್ರಿ 9.30ರೊಳಗೆ ಮನೆಗೆ ಬರುತ್ತೇನೆ, ನನ್ನ ಮೊಬೈಲ್ ಚಾರ್ಜ್ ಇಲ್ಲ ಎಂದು ಹೇಳಿದ್ದರು. ನಂತರ ಈ ವರೆಗೂ ಕರೆ ಮಾಡಿಲ್ಲ. ಅವರ ಫೋನ್ ಸ್ವಿಚ್ ಆಫ್ ಆಗಿದೆ. ಈವರಿಗೆ ಕಿಡ್ನಿ ಸಮಸ್ಯೆ ಇದ್ದು ಕಳೆದ 2 ವರ್ಷದ ಹಿಂದೆ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಹೋಗಿ ಬರುತ್ತಿದ್ದರು. ಅಲ್ಲದೆ ಬೆನ್ನು ನೋವಿನಿಂದ ಬಳಲುತ್ತಿದ್ದರು ಎಂದು ಅವರ ಪತ್ನಿ ಜ್ಯೋತಿ ಶೇಖರ ದೂರು ದಾಖಲಿಸಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೆಟ್ಟಿಂಗ್ ಭರಾಟೆ ಜೋರು : ಪ್ರತಿ ತಾಲೂಕಿನಲ್ಲಿ ಪೊಲೀಸ್ ಇಲಾಖೆಯಿಂದ ತೀವ್ರ ನಿಗಾ
- ಅಕ್ಕನ ಅಂತಿಮ ಕಾರ್ಯ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ತಮ್ಮನ ದುರ್ಮರಣ: ಏನಾಯ್ತು ನೋಡಿ?
- ಕೇಣಿ ವಾಣಿಜ್ಯ ಬಂದರು ವಿರೋಧಿ ಹೋರಾಟ ಸಮಿತಿಯಿಂದ ಮಹತ್ವದ ಹೇಳಿಕೆ : ಮೀನುಗಾರಿಕಾ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಖುದ್ದಾಗಿ ಬಂದು ಅಹವಾಲು ಆಲಿಸಲು ಆಗ್ರಹ
- ರೈತರಿಗೆ ಬೆಳೆವಿಮೆ ಕೊಡಿ: ಕಂಪೆನಿಗೆ ಕೇಂದ್ರದ ಖಡಕ್ ಆದೇಶ
- ಗೋವಿಂದಮೂರ್ತಿ ದೇವರ ವರ್ಧಂತಿ: ಗಮನಸೆಳೆದ “ಶ್ರೀನಿವಾಸ ಕಲ್ಯಾಣ” ಪೌರಾಣಿಕ ನಾಟಕ