![](http://i0.wp.com/vismaya24x7.com/wp-content/uploads/2020/07/uttara-kannada-10.png?fit=630%2C342&ssl=1)
ಕಾರವಾರ: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬೆನ್ನಲ್ಲೆ, ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಇಂದು 14 ಕೇಸ್ ದಾಖಲಾಗಿದೆ. ಕಾರವಾರ 5, ಜೋಯ್ಡಾ 3 ಸಿದ್ದಾಪುರ ಒಂದು ಸೇರಿ ಇಂದು ಜಿಲ್ಲೆಯಾದ್ಯಂತ 14 ಕರೊನಾ ಕೇಸ್ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,938ಕ್ಕೆ ಏರಿಕೆಯಾಗಿದೆ.
ಶಿರಸಿಯಲ್ಲಿಂದು ಒಂದು ಕರೊನಾ ಕೇಸ್
ಶಿರಸಿ: ತಾಲೂಕಿನಲ್ಲಿ ಸೋಮವಾರ ಒಂದು ಕರೊನ ಕೇಸ್ ಪತ್ತೆಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ.
ಇಂದು ವಿದ್ಯಾನಗರದ ಓರ್ವನಲ್ಲಿ ಕೊರೊನಾ ದೃಢಪಟ್ಟಿದೆ. ಈವರೆಗೆ 1587 ಮಂದಿಯಲ್ಲಿ ಕೊರೊನಾ ದೃಢವಾದಂತಾಗಿದೆ.
ಹೊನ್ನಾವರದಲ್ಲಿ ಒಂದು: ಕುಮಟಾದಲ್ಲಿ ಶೂನ್ಯ
ಹೊನ್ನಾವರ: ತಾಲೂಕಿನಲ್ಲಿ ಇಂದು 1 ಕರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ತಾಲೂಕಿನ ಪಟ್ಟಣ ಪ್ರದೇಶವಾದ ದುರ್ಗಾಕೇರಿಯ 24 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ವಿವಿಧ ಆಸ್ಪತ್ರೆಯಲ್ಲಿ 2 ಜನರು ಹಾಗೂ ಮನೆಯಲ್ಲಿ 3 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕುಮಟಾ ತಾಲೂಕಾ ವ್ಯಾಪ್ತಿಯಲ್ಲಿ ಯಾವುದೇ ಕರೊನಾ ಸೋಂಕಿತ ಪ್ರಕರಣ ಪಾತ್ತೆಯಾಗಿಲ್ಲವಾಗಿದೆ.
ವಿಸ್ಮಯ ನ್ಯೂಸ್ ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
- ಲಾರಿಯ ಜೊತೆ ಇನ್ನು ಕೆಲ ವಾಹನಗಳು ಸಿಲುಕಿರುವ ಸುಳಿವು? ಹಾಲಿಕ್ಯಾಪ್ಟರ್ ಮೂಲಕವೂ ಶೋಧ ಕಾರ್ಯ