Uttara Kannada
Trending

ಹೆಲ್ಮೆಟ್ ಇಲ್ಲದಿದ್ರೆ ಪೆಟ್ರೋಲ್ ಇಲ್ಲ: ಹುಷಾರು

ಶಿರಸಿ: ಡಿವೈಎಸ್ಪಿ ರವಿ ನಾಯ್ಕ ಇವರ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಶಿರಸಿ ಶಹರದಲ್ಲಿನ ಪೆಟ್ರೋಲ್ ಬಂಕ್‌ಗಳ ಪ್ರತಿನಿಧಿಗಳು ಭಾಗವಹಿಸಿ ಹೆಲ್ಮೆಟ್ ಇಲ್ಲದವರಿಗೆ ಪೆಟ್ರೋಲ್ ಇಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ಅವರ ಸೂಚನೆಯಂತೆ ಸುರಕ್ಷತಾ ಅಭಿಯಾನದ ಭಾಗವಾಗಿ ದ್ವೀಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ತಮ್ಮ ತಮ್ಮ ಬಂಕ್ ಗಳಲ್ಲಿ ದ್ವೀ ಚಕ್ರ ವಾಹನ ಸವಾರರು ಪೆಟ್ರೋಲ್ ಪಡೆಯಲು ಹೆಲ್ಮೆಟ್ ಧರಿಸುವದನ್ನು ಕಡ್ಡಾಯ ಮಾಡುವ ಬದ್ಧತೆಯನ್ನು ತಿಳಿಸಿದರು.

ಸಾರ್ವಜನಿಕರಲ್ಲಿ ಸುರಕ್ಷತಾ ದೃಷ್ಟಿ ಯ ಅರಿವು ಮೂಡಿಸುವ ಕಾರ್ಯ ಮಾಡಲು ಈ ಸಂದರ್ಭದಲ್ಲಿ ನಿರ್ಧರಿಸಲಾಯಿತು. ಇನ್ನಾದರೂ ಸಾರ್ವಜನಿಕರು ಈ ಸುರಕ್ಷತಾ ಅಭಿಯಾನದಲ್ಲಿ ದ್ವಿ ಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೇಟ್ ಧರಿಸುವ ಮೂಲಕ ಸಹಕರಿಸಬೇಕೆಂದು ಜಿಲ್ಲಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Back to top button