Uttara Kannada
Trending

ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಯಲ್ಲಾಪುರ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ತಕ್ತಿಯ ಮೇಲೆ ಚಿರತೆಯೊಂದ ದಾಳಿ ಮಾಡಿ ಗಂಭೀರವಾಗಿ ಗಾಯಮಾಡಿರುವ ಘಟನೆ ತಾಲೂಕಿನ ಚನ್ನೆಹುಕ್ಕಳಿ ಬಳಿ ನಡೆದಿದೆ. ತನ್ನ ಅಡಿಕೆ ತೋಟದಲ್ಲಿ ರೈತ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಏಕಿ ತೋಟಕ್ಕೆ ಬಂದ ಚಿರತೆ ರೈತನ ಮೇಲೇರಗಿ, ತಲೆ, ಮುಖಕ್ಕೆ ಪರಚಿ ಗಾಯಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರೈತನನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಅಪ್ಪಿ ಬಾಬು ಮರಾಠಿ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button