
ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ
ಪೊಲೀಸರಿಗೆ ಧನ್ಯವಾದ ತಿಳಿಸಿದ ಪೋಷಕರು
ಶಿರಸಿ: ಸತ್ತೆ ಹೋಗಿದ್ದ ಎಂದುಕೊoಡಿದ್ದ ಮಗ ಮನೆಗೆ ಬಂದಾಗ, ತಂದೆ-ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಹೌದು, ಹೆತ್ತ ಮಗ ಸತ್ತೆ ಹೋದ ಅಂತ ಹೆತ್ತವರು ಕಣ್ಣೀರು ಹಾಕುತ್ತಿರುವಾಗಲೇ, ಪೊಲೀಸರು ಮಗನನ್ನು ಹುಡುಕಿ, ನೋಂದ ಪೋಷಕರ ಬಾಳದಲ್ಲಿ ಮಂದಹಾಸ ಮೂಡಿಸಿದ್ದಾರೆ. ಪ್ರಶಾಂತ್ ಚೆಂದ್ರಶೆಟ್ಟಿ ಎನ್ನುವವನು ಒಂದು ತಿಂಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿ ಶಿರಸಿಯ ಹಲವೆಡೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಶಿರಸಿಯ ಪೊಲೀಸರು, ಆತನನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಿದ್ದರು.
ತಿಂಗಳುಗಳ ಕಾಲ ಚಿಕಿತ್ಸೆಯ ಬಳಿಕ ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ ಚೇತರಿಸಿಕೊಂಡಿದ್ದಾನೆ. ಆರೋಗ್ಯ ಚೇತರಿಕೆ ಕಂಡ ಬಳಿಕ ತಂದೆ-ತಾಯಿಯ ಹೆಸರು, ವಿಳಾಸ ತಿಳಿಸಿದ್ದಾರೆ. ಈ ವಿಷಯ ತಿಳಿದ ಪಾಲಕರು, ಮಗನನ್ನು ನೋಡಲು ಕೂಡಲೇ ಆಗಮಿಸಿದ್ದಾರೆ. ಪೊಲೀಸರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಗನನ್ನು ಮತ್ತೆ ನೋಡುವಂತೆ ಮಾಡಿದಕ್ಕೆ ಧನ್ಯವಾದ ಸಲ್ಲಿಸಿದರು.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ