
ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ
ಪೊಲೀಸರಿಗೆ ಧನ್ಯವಾದ ತಿಳಿಸಿದ ಪೋಷಕರು
ಶಿರಸಿ: ಸತ್ತೆ ಹೋಗಿದ್ದ ಎಂದುಕೊoಡಿದ್ದ ಮಗ ಮನೆಗೆ ಬಂದಾಗ, ತಂದೆ-ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಹೌದು, ಹೆತ್ತ ಮಗ ಸತ್ತೆ ಹೋದ ಅಂತ ಹೆತ್ತವರು ಕಣ್ಣೀರು ಹಾಕುತ್ತಿರುವಾಗಲೇ, ಪೊಲೀಸರು ಮಗನನ್ನು ಹುಡುಕಿ, ನೋಂದ ಪೋಷಕರ ಬಾಳದಲ್ಲಿ ಮಂದಹಾಸ ಮೂಡಿಸಿದ್ದಾರೆ. ಪ್ರಶಾಂತ್ ಚೆಂದ್ರಶೆಟ್ಟಿ ಎನ್ನುವವನು ಒಂದು ತಿಂಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿ ಶಿರಸಿಯ ಹಲವೆಡೆ ಸುತ್ತಾಡುತ್ತಿದ್ದ. ಇದನ್ನು ಗಮನಿಸಿದ ಶಿರಸಿಯ ಪೊಲೀಸರು, ಆತನನ್ನು ಧಾರವಾಡದ ಮಾನಸಿಕ ಆಸ್ಪತ್ರೆಗೆ ಸೇರಿಸಿದ್ದರು.
ತಿಂಗಳುಗಳ ಕಾಲ ಚಿಕಿತ್ಸೆಯ ಬಳಿಕ ಮಾನಸಿಕ ಅಸ್ವಸ್ಥಗೊಂಡಿದ್ದ ಯುವಕ ಚೇತರಿಸಿಕೊಂಡಿದ್ದಾನೆ. ಆರೋಗ್ಯ ಚೇತರಿಕೆ ಕಂಡ ಬಳಿಕ ತಂದೆ-ತಾಯಿಯ ಹೆಸರು, ವಿಳಾಸ ತಿಳಿಸಿದ್ದಾರೆ. ಈ ವಿಷಯ ತಿಳಿದ ಪಾಲಕರು, ಮಗನನ್ನು ನೋಡಲು ಕೂಡಲೇ ಆಗಮಿಸಿದ್ದಾರೆ. ಪೊಲೀಸರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಗನನ್ನು ಮತ್ತೆ ನೋಡುವಂತೆ ಮಾಡಿದಕ್ಕೆ ಧನ್ಯವಾದ ಸಲ್ಲಿಸಿದರು.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು