
ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು , ಶ್ರೀರಾಮಚಂದ್ರಾಪುರಮಠ, ಇವರ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 14-12 -2020 ಸೋಮವಾರ ಕಾರ್ತೀಕ ಅಮಾವಾಸ್ಯೆಯಂದು ಶಾರ್ವರಿ ಸಂವತ್ಸರದ ರಂಗಪೂಜೆ (ಎಡೆ ಅಮಾವಾಸ್ಯೆ) ಉತ್ಸವ, ರಥೋತ್ಸವ ಸಂಪನ್ನಗೊoಡಿತು.
ಅರ್ಚಕರಾದ ವೇ.ಮೂ. ಸಾಂಬ ಭಟ್ ಷಡಕ್ಷರಿ ಇವರು ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು ಹಾಗೂ ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಶ್ರೀ ಜಿ.ಕೆ.ಹೆಗಡೆ ಉಪಸ್ಥಿತರಿದ್ದರು. ಶ್ರೀದೇವರಿಗೆ 108 ಎಡೆ ವಿಶೇಷ ಭಕ್ಷ್ಯ ನೈವೇದ್ಯ ಸಲ್ಲಿಸಲಾಯಿತು. ಪೂಜೆಯ ನಂತರ ದೇವಾಲಯದಲ್ಲಿ ಸೇವೆ ಸಲ್ಲಿಸುವ ವಿವಿಧ ಸಮಾಜದ ಕಾರ್ಯಕರ್ತರಿಗೆ ಎಡೆ ಪ್ರಸಾದವನ್ನು ವಿತರಿಸಲಾಯಿತು.
ವಿಸ್ಮಯ ನ್ಯೂಸ್, ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ