ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು , ಶ್ರೀರಾಮಚಂದ್ರಾಪುರಮಠ, ಇವರ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 14-12 -2020 ಸೋಮವಾರ ಕಾರ್ತೀಕ ಅಮಾವಾಸ್ಯೆಯಂದು ಶಾರ್ವರಿ ಸಂವತ್ಸರದ ರಂಗಪೂಜೆ (ಎಡೆ ಅಮಾವಾಸ್ಯೆ) ಉತ್ಸವ, ರಥೋತ್ಸವ ಸಂಪನ್ನಗೊoಡಿತು.
ಅರ್ಚಕರಾದ ವೇ.ಮೂ. ಸಾಂಬ ಭಟ್ ಷಡಕ್ಷರಿ ಇವರು ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು ಹಾಗೂ ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಶ್ರೀ ಜಿ.ಕೆ.ಹೆಗಡೆ ಉಪಸ್ಥಿತರಿದ್ದರು. ಶ್ರೀದೇವರಿಗೆ 108 ಎಡೆ ವಿಶೇಷ ಭಕ್ಷ್ಯ ನೈವೇದ್ಯ ಸಲ್ಲಿಸಲಾಯಿತು. ಪೂಜೆಯ ನಂತರ ದೇವಾಲಯದಲ್ಲಿ ಸೇವೆ ಸಲ್ಲಿಸುವ ವಿವಿಧ ಸಮಾಜದ ಕಾರ್ಯಕರ್ತರಿಗೆ ಎಡೆ ಪ್ರಸಾದವನ್ನು ವಿತರಿಸಲಾಯಿತು.
ವಿಸ್ಮಯ ನ್ಯೂಸ್, ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಹೋಮ್ಸ್ಟೇನಲ್ಲಿರುವಾಗ ಪ್ರವಾಸಿಗನಿಗೆ ಹೃದಯಾಘಾತ: ವಾಕಿಂಗ್ ಮಾಡುತ್ತಿದ್ದ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್
- ಹಾಂಕಾಂಗ್ ನಲ್ಲಿ ನಡೆದ ಏಷಿಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ: ತವರಿಗೆ ಮರಳಿದ ಸಾಧಕನಿಗೆ ಅದ್ಧೂರಿ ಸನ್ಮಾನ
- ಶೇಷಗಿರಿ ನಾಡಕರ್ಣಿ ವಿಧಿವಶ: ಮುಂಬೈ ಸರ್ಕಾರದ ಕಾಲಾವಧಿಯಲ್ಲಿ ಅಧಿಕಾರಿಯಾಗಿದ್ದ ನೇರ, ನಿಷ್ಠುರ ವ್ಯಕ್ತಿತ್ವದ ಹಿರಿಯ ಜೀವ ಇನ್ನಿಲ್ಲ
- ಇಬ್ಬರು ಅಪ್ರಾಪ್ತ ಬಾಲಕಿಯರು ನಾಪತ್ತೆ: ಆಗಿದ್ದಾದರು ಏನು?
- Cochin Shipyard Recruitment 2024: ಹೊಸ ನೇಮಕಾತಿ: ವಿದ್ಯಾರ್ಹತೆ 7ನೇ ತರಗತಿ: 20 ಸಾವಿರ ಮಾಸಿಕ ವೇತನ