
ಗೋಕರ್ಣ: ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯ ಸರ್ಕಾರದ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ರವರು ಕುಟುಂಬ ಸಮೇತರಾಗಿ ಆಗಮಿಸಿದ್ದರು. ಈ ವೇಳೆ ಮಹಾಬಲೇಶ್ವರನಿಗೆ ಗಂಗಾಭಿಷೇಕ, ನವಧಾನ್ಯ ಅಭಿಷೇಕ, ಸುವರ್ಣ ನಾಗಾಭರಣ ಪೂಜೆ ಮಾಡಿದರು. ಉಪಾಧಿವಂತ ಮಂಡಳಿಯವರು ಪೂಜಾ ಕೈಂಕರ್ಯ ನೆರವೇರಿಸಿದರು. ಶ್ರೀ ದೇವಾಲಯದ ಆಡಳಿತಾಧಿಕಾರಿಗಳಾದ ಜಿ ಕೆ ಹೆಗಡೆಯವರು ಸಚಿವರಿಗೆ ಗೌರವ ಸಮರ್ಪಿಸಿದರು.
ಸಚಿವರು ದೇವಾಲಯದ ಸ್ವಚ್ಛತೆ, ಶಿಸ್ತು ಬದ್ಧತೆ ಮತ್ತು ಪೂಜಾ ವಿಧಾನಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಆತ್ಮಲಿಂಗ ವಿಶ್ವರೂಪ ದರ್ಶನದ ಆಸಕ್ತಿ ವ್ಯಕ್ತಪಡಿಸಿದರು.
ವಿಸ್ಮಯ ನ್ಯೂಸ್, ಗೋಕರ್ಣ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ