Big News
Trending

ಹೊಸ ವರ್ಷಾಚರಣೆ & ಕ್ರಿಸ್ಮಸ್ ಮಾರ್ಗಸೂಚಿ: ಈ ನಿಯಮಗಳ ಪಾಲನೆ ಕಡ್ಡಾಯ

ಮೋಜ-ಮಸ್ತಿಯ ಯೋಚನೆಯಲ್ಲಿದ್ದವರಿಗೆ ನಿರಾಸೆ
ಹಲವು ನಿರ್ಭಂದ ವಿಧಿಸಿದ ರಾಜ್ಯ ಸರ್ಕಾರ

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೇ, ರಾಜ್ಯ ಸರ್ಕಾರವು ಕೋವಿಡ್‌ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳ ಪ್ರಕಾರ ಡಿಸೆಂಬರ್‌ 20ರ ನಂತರ ರಾಜ್ಯದಲ್ಲಿ ಸಾಮೂಹಿಕ ಕೂಟಗಳನ್ನು ಏರ್ಪಡಿಸಲು ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಆಚರಿಸಲು ಕರೆ ನೀಡಲಾಗಿದೆ.

ಇದರೊಂದಿಗೆ ರಾಜ್ಯಾದ್ಯಂತ ಸಾಮೂಹಿಕ ಅಂತರವಿಲ್ಲದೇ ಜನರು ಸೇರುವಂತಹ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಸತಿ ಸಮುಚ್ಚಾಯಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ, ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಹೊಸ ವರ್ಷಾಚರಣೆಯ ಸಂದರ್ಭ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅನುಮತಿ ನೀಡಲಾಗಿದೆ.

ಕ್ರಿಸ್‌ಮಸ್ ಆಚರಣೆ ಸಂದರ್ಭದಲ್ಲಿ ಚರ್ಚ್ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗು ಕಡ್ಡಾಯ ಮಾಸಕ್ ಧರಿಸುವ ಕುರಿತು ಆಯೋಜಕರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಹಸ್ತಲಾಘವ ಮತ್ತು ಆಲಿಂಗನಕ್ಕೆ ಅವಕಾಶ ಇಲ್ಲ. ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕ ಸ್ಥಳದಲ್ಲಿ , ಮುಖ್ಯ ರಸ್ತೆಗಳಲ್ಲಿ, ಹೆಚ್ಚು ಜನ ಸೇರುವಿಕೆ ಮತ್ತು ಸಂಭ್ರಮಾಚರಣೆ ನಿಷೇಧಿಸಲಾಗಿದೆ.

ಇದರ ಹೊರತಾಗಿ, ಈ ಹಿಂದೆ ಜಾರಿಯಲ್ಲಿದ್ದ ಕೋವಿಡ್‌ ಮಾರ್ಗಸೂಚಿ ಯಥಾ ಪ್ರಕಾರ ಮುಂದುವರೆಯುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹೊಸ ಮಾರ್ಗಸೂಚಿಗಳು ಡಿಸೆಂಬರ್‌ 20, 2020ರಿಂದ ಜನವರಿ 2, 2021ರ ವರೆಗೆ ಚಾಲ್ತಿಯಲ್ಲಿರುತ್ತದೆ.

ಆದೇಶದಲ್ಲಿನ ಮಾರ್ಗಸೂಚಿಗಳು ಹೀಗಿವೆ:

ಕ್ರೈಸ್ತ ಧರ್ಮದ ಚರ್ಚ್‌ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು/ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೊವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
ದಿನಾಂಕ 30.12.2020 ರಿಂದ 02.01.2021ರವರಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು ವಿಶೇಷ ಪಾರ್ಟಿ, ಇತ್ಯಾದಿ ನಿಷೇಧಿಸಿದೆ.ಆದರೆ, ಕ್ಲಬ್/ ಪಬ್/ ರೆಸ್ಟೋರೆಂಟ್‌ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.

ಹೊಸ ವರ್ಷಾಚರಣೆ ಸಂಬಂಧದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.
ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ, ಸ್ಮಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು.
ಸರ್ಕಾರದ ಆದೇಶ ಸಂಖ್ಯೆ ಕಂ.ಇ 158 ಟಿ ಎನ್ ಆರ್ 2020 ದಿನಾಂಕ 27-11-2020 ರಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಅದರಂತೆ ಬಹು ಮುಖ್ಯವಾಗಿ 65ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‌ಗಳು/ಮಾಲ್‌ಗಳು/ ವೆಬ್/ ರೆಸ್ಟೋರೆಂಟ್‌ಗಳು ಹಾಗೂ ಅಂತಹ ಪ್ರದೇಶಗಳಲ್ಲಿಥರ್ಮಲ್ ಸ್ಮಿನಿಂಗ್ ಹಾಗೂ ಸ್ಮಾನಿಟೈಸರ್‌ ವ್ಯವಸ್ಥೆಯನ್ನು ಕಡಾಯವಾಗಿ ಇರಿಸತಕ್ಕದ್ದು.

ಹೋಟೆಲ್‌ಗಳು/ಮಾಲ್‌ಗಳು/ಪಬ್/ರೆಸ್ಟೋರೆಂಟ್‌ಗಳು ಹಾಗೂ ಅಂತಹ ಸ್ಥಳ/ಪ್ರದೇಶಗಳಲ್ಲಿ ಅದರ ಮಾಲೀಕರು ಕಡಾಯವಾಗಿ ಸರ್ಕಾರದ ಆದೇಶದಂತೆ ಕೊವಿಚ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸುವುದು ಅಗತ್ಯವಿದ್ದಲ್ಲಿ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ/ಟೊಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು (Pre Booking) ವ್ಯವಸ್ಥೆಯನ್ನು ಕಲ್ಪಿಸುವುದು.
ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು.

ಸರ್ಕಾರದ ಮಾರ್ಗಸೂಚಿಯಂತೆ ಕಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು.
ಕೊವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇಲಾಖೆ/ಕಾರ್ಪೋರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡಾಯವಾಗಿ ಪಾಲಿಸತಕ್ಕದ್ದು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ | ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button