Follow Us On

WhatsApp Group
Uttara Kannada
Trending

ಹಣ್ಣು ಕೊಯ್ಯುವ ನೆಪದಲ್ಲಿ ತೋಟಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

ಯಲ್ಲಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕನೇ ಅತ್ಯಾಚಾರ ಮಾಡಿದ ಘಟನೆ ತಾಲೂಕಿನ ಉಪಳೇಶ್ವರದಲ್ಲಿ ನಡೆದಿದೆ. 16 ವರ್ಷದ ಬಾಲಕಿಯನ್ನು ಹಣ್ಣು ಕೊಯ್ಯುವ ನೆಪದಲ್ಲಿ ತೋಟಕ್ಕೆ ಕರೆದುಕೊಂಡು ಹೋಗಿ ಸಂಬಂಧಿಕನೇ ಅತ್ಯಾಚಾರ ಮಾಡಿದ್ದಾನೆ. ಆರೋಪಿಯನ್ನು ಯಲ್ಲಾಪುರ ಉಪಳೇಶ್ವರದ ಚಂದ್ರಶೇಖರ್ ಪಾಂಡು ಸಿದ್ದಿ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿಯಾಗಿರುವ 16 ವರ್ಷದ ಬಾಲಕಿಯನ್ನು ಹಣ್ಣು ಕೊಯ್ಯುವ ನೆಪ ಮಾಡಿಕೊಂಡು ತೋಟಕ್ಕೆ ಕರೆದುಕೊಂಡು ಹೋಗಿದ್ದು, ದುಷ್ಕøತ್ಯ ಮಾಡಿದ್ದಾನೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಇದನ್ನೂ ಓದಿ: ಪ್ರಮುಖ ಸುದ್ದಿಗಳು

Back to top button