ನನ್ನ ಸಾವಿಗೆ ನಾನೇ ಕಾರಣ, ಕ್ಷಮಿಸಿ

ಶಿರಸಿ: ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ನೇಣಿಗೆ ಶರಣಾದ ಘಟನೆ ತಾಲೂಕಿನ ಗಣೇಶ ನಗರದ ಬೆನಕ ಕಾಲೋನಿಯಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಪ್ರಮೋದ್ ಭಂಡಾರಿ ಎಂದು ಗುರುತಿಸಲಾಗಿದೆ. ವ್ಯಕ್ತಿ ತೀವ್ರವಾದ ಎದೆ ನೋವಿನಿಂದ ಬಳಲುತ್ತಿರುವುದಾಗಿ ಇದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ತನ್ನ ಸಾವಿಗೆ ತಾನೇ ಕಾರಣ ಸ್ನೇಹಿತರು, ಸಂಬoಧಿಕರು ತನ್ನನ್ನು ಕ್ಷಮಿಸಿಬೇಕು ಎಂದು ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾನೆ ಎನ್ನಲಾಗಿದೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version