ಮತ್ತು ಬರಿಸುವ ಔಷಧಿ ಸಿಂಪಡಿಸಿ ಮಗಳನ್ನೇ ಅಪಹರಿಸಿದ ತಾಯಿ

ಮಗಳ ಮನೆಗೆ ಏಕಾಏಕಿ ನುಗ್ಗಿದ್ದರು
ಪತಿಯ ಮುಂದೆಯೇ ಪತ್ನಿಯ ಅಪಹರಣ

ಶಿರಸಿ: ತಾಲೂಕಿನಲ್ಲಿ ನಡೆದ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೌದು., ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಗಳು ಮಹಿಳೆಗೆ ಮತ್ತು ಬರಿಸುವ ಔಷಧಿ ಸಿಂಪಡಿಸಿ, ಕಿಡ್ಯಾಪ್ ಮಾಡಿದ್ದರು. ಇದು ಜಿಲ್ಲೆಯಾದ್ಯಂತ ಆತಂಕ್ಕೆ ಕಾರಣವಾಗಿತ್ತು. ಆದರೀಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಹೌದು, ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ರುತಿಕಾ ಎಂಬ ಯುವತಿ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬುವ ಯುವಕನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು.

ಆದರೆ, ಈ ಮದುವೆ ಯುವತಿಯ ತಾಯಿಗೆ ಇಷ್ಟವಿರಲಿಲ್ಲ. ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತಿದ್ದ ಆಕೆಯ ತಾಯಿ ರೂಪ ಶಿರ್ಸಿಕರ್ ಇದಕ್ಕೆ ಏನಾದರು ಪರಿಹಾರ ಕಂಡುಕೊoಡಳ್ಳಲು ಮುಂದಾಗಿದ್ದರು. ಮಗಳು ತನ್ನ ಮಾತು ಕೇಳದೇ ಬೇರೆ ಯುವಕನನ್ನು ವಿವಾಹವಾಗಿದ್ದಕ್ಕೆ ಕುಪಿತಗೊಂಡ ತಾಯಿ, ಹಾಗು ಮೂರು ಜನ ಯುವಕರೊಂದಿಗೆ ಬಸವೇಶ್ವರ ನಗರದಲ್ಲಿದ್ದ ರುತಿಕಾ ಮನೆಗೆ ಏಕಾಏಕಿ ದಾವಿಸಿದ್ದಾಳೆ. ಈ ವೇಳೆ ಮನೆಯಲ್ಲಿದ್ದ ಎಲ್ಲರಿಗೂ ಪೆಪ್ಪರ್ ಸ್ಪ್ರೇ ಯನ್ನು ಮುಖಕ್ಕೆ ಎರಚಿ ಮಗಳನ್ನು ಆಕೆಯ ಗಂಡನ ಎದುರೇ ತಾನು ತಂದಿದ್ದ ಕಾರಿನಲ್ಲಿ ಅಪಹರಿಸಿ ಕರೆದೊಯ್ದಿದ್ದಾಳೆ.

ಘಟನೆ ಸಂಬoಧ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಮಣಿಕಂಠ ಅವರು ಪತ್ನಿ ಅಪಹರಣದ ಬಗ್ಗೆ ದೂರು ನೀಡಿದ್ದಾರೆ. ಇನ್ನು ಅಪಹರಣ ಮಾಡಿದ ರೂಪ ಮೊಬೈಲ್ ಸುಚ್ ಆಫ್ ಮಾಡಿ ಕುಟುಂಬದೊoದಿಗೆ ಪರಾರಿಯಾಗಿದ್ದು ಈಕೆಯ ಹುಡುಕಾಟ ನಡೆಸಲಾಗುತ್ತಿದೆ.


ವಿಸ್ಮಯ ನ್ಯೂಸ್, ಶಿರಸಿ

Exit mobile version