ಶಿರಸಿ: ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದ ಕಾರ್ತಿಕ ಉತ್ಸವವು ಡಿಸೆಂಬರ್ 29 ರಿಂದ ಜನವರಿ 1ರ ವರೆಗೆ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷದ ಕಾರ್ತಿಕ ಉತ್ಸವವನ್ನು ಸರಕಾರದ ಆದೇಶದಂತೆ ಸರಳವಾಗಿ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು. ಧಾರ್ಮಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದಂತೆ ಕೀರ್ತನೆ,ಸಾಂಸ್ಕೃತಿಕ ಕಾರ್ಯಕ್ರಮ,ಕೋಲಾಟ, ಡೊಳ್ಳು ಕುಣಿತ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿರುತ್ತದೆ.
ಮಂಗಳವಾರದ “ದೀಪೋತ್ಸವ”ದಂದು ಶ್ರೀದೇವಿಯ ಪಲ್ಲಕ್ಕಿಯು ರಾತ್ರಿ 8 ಗಂಟೆಗೆ ದೇವಾಲಯದಿಂದ ಹೊರಟು ಜಾತ್ರಾ ಗದ್ದುಗೆಗೆ ತೆರಳಿ ಪೂಜೆ ಸಲ್ಲಿಸಿ ಪಲ್ಲಕ್ಕಿಯು ಶ್ರೀ ದೇವಸ್ಥಾನಕ್ಕೆ ಮರಳಿ ಬರುತ್ತದೆ. ತದನಂತರ ರಾತ್ರಿ 10 ಘಂಟೆಗೆ ಮಹಾಮಂಗಳಾರತಿಯೊಡನೆ ಪ್ರಸಾದ ವಿತರಣೆ ನಡೆಸಿ ಶ್ರೀ ದೇವಾಲಯವನ್ನು ಬಂದ್ ಮಾಡಲಾಗುವುದು. ಅದೇ ರೀತಿ ಜನವರಿ 1 ರಂದು ರಾತ್ರಿ 9 ಗಂಟೆಗೆ ದೀಪೋತ್ಸವ ಹಾಗೂ ರಾತ್ರಿ 10 ಗಂಟೆಗೆ ಮಹಾಮಂಗಳಾರತಿ ನೇರವೇರುವುದು.ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಮಾಡಿ ಶ್ರೀ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ ಎಂದು ಶ್ರೀ ದೇವಾಲಯದ ಧರ್ಮದರ್ಶಿಗಳಾದ ಡಾ ವೆಂಕಟೇಶ ನಾಯ್ಕ್ ಮಾಹಿತಿ ನೀಡಿದ್ದು, ಭಕ್ತರು ಸಹಕರಿಸುವಂತೆ ಕೋರಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
[sliders_pack id=”1487″]ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶಿರೂರು ದುರಂತ: ಮತ್ತೆ ಶೋಧ ಕಾರ್ಯಾಚರಣೆ ಶುರು: ನದಿಯಲ್ಲಿ ಸಿಕ್ಕಿದ್ದೇನು? ಮೂಡಿದ ಹೊಸ ಭರವಸೆ
- ಮಗನಿಗೆ ಸರ್ವಸ್ವ ತ್ಯಾಗ ಮಾಡಿದಳು: ದೊಡ್ಡವನಾದ ಬಳಿಕ ವೃದ್ಧೆ ತಾಯಿಯನ್ನು ಮನೆಯಿಂದ ಹೊರಹಾಕಿದ ಮಗ
- Arecanut: ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಹೇಗಿದೆ?
- ಮುಗ್ದ ಹೆಣ್ಣುಮಕ್ಕಳ ವಂಚಿಸುತ್ತಿದ್ದ ಚಾಲಾಕಿ ಮಹಿಳೆ ಬಂಧನ
- ಮುಖ್ಯಾಧಿಕಾರಿ & ಜ್ಯೂನಿಯರ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಎಲ್ಲಿ ?