Focus News
Trending

ಕಾಣಿಕೆ ಹುಂಡಿಯನ್ನೇ ಕದ್ದೊಯ್ದ ಕಳ್ಳ: ಸಿಸಿಟಿವಿಯಲ್ಲಿ ಸೆರೆ

ಹಳಿಯಾಳ: ತಾಲೂಕಿನ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳ್ಳನೊರ್ವ ಕದ್ದೊಯ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಮರಡಿಗುಡ್ಡ ನಿಸರ್ಗಧಾಮದ ಎದುರಿಗಿರುವ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿಯನ್ನು ಕಳುವು ಮಾಡಲಾದ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳನು ದೇವಸ್ಥಾನದ ಕಂಪೌOಡ್ ಹಾರಿ ದೇವಸ್ಥಾನ ಒಳ ಪ್ರವೇಶಿಸಿ ದೇವಾಲಯದ ಆವರಣದಲ್ಲಿದ್ದ ಎರಡು ಕಾಣಿಕೆ ಹುಂಡಿಗಳನ್ನು ಒಡೆಯಲು ಯತ್ನಿಸಿದ್ದಾನೆ. ಆದರೆ ಆ ಪ್ರಯತ್ನ ವಿಫಲವಾದಾಗ ಕಂಪೌAಡ್ ಆಚೆಗೆ ಆ ಎರಡು ಕಾಣಿಕೆ ಹುಂಡಿಗಳನ್ನು ಎಸೆದು ಹುಂಡಿಗಳ ಸಮೇತ ಪರಾರಿಯಾಗಿದ್ದಾನೆ. ಈ ಘಟನೆ ನಡೆದು 4 ದಿನಗಳಾದರೂ ಸ್ಥಳೀಯ ಪೋಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಮದುವೆ ಆಗುತ್ತಿಲ್ಲವೇ? ಉದ್ಯೋಗ ಸಮಸ್ಯೆಯೇ? ಇಲ್ಲಿದೆ ಪರಿಹಾರ

ದೈವಜ್ಞ ವಿದ್ಯಾಭೂಷಣ ಪ್ರಶಸ್ತಿ ವಿಜೇತರು, ದುರ್ಗಾದೇವಿ ಉಪಾಸಕರಾದ ಪಂಡಿತ ಶ್ರೀ ವಿ.ರಾಘವೇಂದ್ರ ರಾವ್ ಶಾರ್ಮಾ ಅವರು ಕೆಲವೇ ದಿನಗಳಲ್ಲಿ ಈ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾರೆ. ಇವರು ಕಾಶಿಯಲ್ಲಿ ಜ್ಞಾನ ತಪಸ್ಸಿನಿಂದ ಯಂತ್ರ-ಮoತ್ರ-ವಾಕ್ಯಸಿದ್ಧಿ-ಸoಪಾದಿಸಿದ್ದು, ನೀವು ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು. ಕೂಡಲೇ ಸಂಪರ್ಕಿಸಿ: 9440269990

Back to top button