
ಯಲ್ಲಾಪುರ: ಖಾಸಗಿ ಬಸ್ ನಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಹವಾಲಾ ಹಣ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಯಲ್ಲಾಪುರದ ಜೋಡುಕೆರೆ ಬಳಿ ನಡೆದಿದೆ.
ಗುಜರಾತ್ ಮೂಲದ ದಿನೇಶ ಠಾಕೂರ (34), ಪಂಕಜಕುಮಾರ ಪಟೇಲ್ (40), ಗೋವಿಂದ ಪಟೇಲ್ (50), ಮುಖೇಶ ಪಟೇಲ್ (55), ಉಪೇಂದ್ರ ಪಟೇಲ್ (47) ಬಂಧಿತ ಆರೋಪಿಗಳು. ಬೆಳಗಾವಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎ 51 ಎಎಫ್ 9490 ನಂಬರಿನ ಗಣೇಶ ಟ್ರಾವೆಲ್ಸ್ ಬಸ್ ನಲ್ಲಿ ಸಾಗಿಸುತ್ತಿದ್ದಾಗ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಅದರಂತೆ ಪರಿಶೀಲನೆ ನಡೆಸಿದಾಗ ಹವಾಲ ಹಣದ ಸಹಿತ ಆರೋಪಿಗಳು ಪತ್ತೆಯಾಗಿದ್ದು ಎಲ್ಲರನ್ನು ಬಂಧಿಸಲಾಗಿದೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಯಲ್ಲಾಪುರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು