ಗೋಕರ್ಣ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಹನೇಹಳ್ಳಿ ಗ್ರಾಮದ ಶ್ರೀ ಸಂಕದ ಮಹಾಸತಿ ದೇವಸ್ಥಾನದಲ್ಲಿ ಸುಮಾರು 22 ಗ್ರಾಂ ತೂಕದ ಬಂಗಾರದ ಕರಿಮಣಿ ಸರ(ಮಂಗಳಸೂತ್ರ) ಹಾಗೂ ಸುಮಾರು 5000/- ರೂ ಕಾಣಿಕೆ ಹಣ ಕಳ್ಳತನವಾದ ಬಗ್ಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ದಿನಾಂಕ 20-01-2021 ರಂದು ಶ್ರೀ ಮಹಾಸತಿ ದೆವಸ್ಥಾನ ಕಳ್ಳತನ ಮಾಡಿದ ಆರೋಪಿತನಾದ ವಿವೇಕಾನಂದ ಎಂದು ತಿಳಿದುಬಂದಿದೆ. ಈತ ಬೋಟಿನ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಅಂಕೋಲಾ ತಾಲೂಕಿನ ಬೆಳಂಬಾರದವನು ಎಂದು ತಿಳಿದುಬಂದಿದೆ. ಈತನನ್ನು ಕುಮಟಾ ತಾಲೂಕಾ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆಗೊಳಪಡಿಸಿ ಆರೋಪಿತನಿಂದ 22 ಗ್ರಾಂ ತೂಕದ ಸುಮಾರು 62,000/- ರೂ ಮೌಲ್ಯದ ಬಂಗಾರದ ಮಂಗಳ ಸೂತ್ರ(ಕರಿಮಣಿ ಸರ) ವನ್ನು ವಶಪಡಿಸಿಕೊಂಡು ಆರೋಪಿತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದ ಆರೋಪಿತನಿಗೆ ಕಳೆದ ಕೆಲವು ದಿನಗಳ ಹಿಂದೆ ಕುಮಟಾ ಪೊಲಿಸ್ ಠಾಣಾ ವ್ಯಾಪ್ತಿಯ ಕೊಡ್ಕಣಿಯಲ್ಲಿ ದೇವಸ್ಥಾನ ಕಳ್ಳತನ ಪ್ರಕರಣ, ಅಂಕೋಲಾದ ಕೊಗ್ರೆ, ಹೊನ್ನಿಬೈಲ್, ಹಾಗೂ ಹೊನ್ನರಾಕಾ ದೇವಸ್ಥಾನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಗೋಕರ್ಣ ಪೊಲೀಸ್ ಠಾಣೆಯ ಪಿ.ಎಸ್.ಐ ನವೀನ್ ನಾಯ್ಕ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ವಿಸ್ಮಯ ನ್ಯೂಸ್ ಗೋಕರ್ಣ
- ವಿಸ್ಮಯ ಟಿ.ವಿ ಫಲಶೃತಿ: ಹೆದ್ದಾರಿಯಲ್ಲಿ ಹೊಂಡ ಗುಂಡಿ ಮುಚ್ಚುವ ಕಾರ್ಯ ಆರಂಭ
- ಅನಂತ್ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ!
- ಶಿರೂರು ಗುಡ್ಡ ಕುಸಿತ ದುರಂತ: ಮತ್ತೆ ಮುಂದುವರಿಯಲಿರುವ ಶೋಧ ಕಾರ್ಯಾಚರಣೆ
- ಆಟೋದಲ್ಲಿ ಪ್ಯಾಲೆಸ್ತೀನ್ ಬಂಬಲಿಸಿ ಧ್ವಜ: ಕೆಲವೇ ಗಂಟೆಯಲ್ಲಿ ಪೊಲೀಸರು ತೆರವುಗೊಳಿದ್ದು ಏಕೆ?
- ನೇಮಕಾತಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: Canara Bank Recruitment