Follow Us On

WhatsApp Group
Important
Trending

ಸಭೆಯಲ್ಲಿ ಇದ್ದಾಗಲೇ ಆರ್ ಅಶೋಕ್ ಗೆ ಸಿಎಂ‌ ದೂರವಾಣಿ ಕರೆ: ತುರ್ತಾಗಿ ಬೆಂಗಳೂರಿಗೆ ಬರುವಂತೆ ಬುಲಾವ್

  • ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕವರಿಗೆ ಮುಖ್ಯಮಂತ್ರಿಗಳಿಂದ ದೂರವಾಣಿ ಕರೆ:
  • ಕೂಡಲೇ ಬೆಂಗಳೂರಿಗೆ ಬರಲು ತುರ್ತು ಬುಲಾವ್

ಭಟ್ಕಳ: ಆನಂದ ಸಿಂಗ್ ರಾಜೀನಾಮೆ‌ ವದಂತಿ ಹಿನ್ನೆಲೆಯಲ್ಲಿ ಭಟ್ಕಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್. ಅಶೋಕ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಂದ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರುವಂತೆ ಹೇಳಿದ್ದಾರೆ

ತಾಲೂಕಿನ ನೂತನ ಮಿನಿವಿಧಾನ ಸೌಧ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಆರ್.ಅಶೋಕವರು  ಕಾರ್ಯಕ್ರಮ ಉದ್ದೇಶಿ ಮಾತನಾಡುತ್ತಿರುವ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವ ಕರೆ ಬಂದಿದೆ. ತಕ್ಷಣ ಸ್ಟೇಜ್ ನಿಂದ ಕೆಳೆಗಿಳಿದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು ರಾತ್ರಿಯೊಳಗಾಗಿ ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದಾರೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆನಂದ ಸಿಂಗ್ ರಾಜೀನಾಮೆ ಕೊಟ್ಟಿದ್ದಾರೋ, ಕೊಟ್ಟಿಲ್ಲವೋ ನನಗೆ ಇನ್ನು ಸ್ಪಷ್ಟವಾಗಿ ಗೊತ್ತಾಗಿಲ್ಲ. ಈ ಬಗ್ಗೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮುಖ್ಯಮಂತ್ರಿಗಳ ಜೊತೆ ಮಾತಾಡುತ್ತೇವೆ. ಅಲ್ಲದೆ ಈ ಬಗ್ಗೆ ಆನಂದಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button