ಬಯಲು ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಗುಜರಿ ಅಂಗಡಿಗೆ ತಗುಲಿತು: ಅಪಾರ ನಷ್ಟ, ವಾಹನ ಸಂಚಾರ ಅಸ್ತವ್ಯಸ್ತ

ಭಟ್ಕಳ: ತಾಲೂಕಿನ ಪುರವರ್ಗ ಗಣೇಶ ನಗರದ ಬಯಲು ಪ್ರದೇಶದಲ್ಲಿ ಆಕಸ್ಮಿಕವಾಗಿ ಹೊತ್ತುಕೊಂಡ ಬೆಂಕಿ ಪ್ರಮಾಣ ಹೆಚ್ಚಾಗಿ ನಂತರ ಸಮೀಪವಿರುವ ಗುಜರಿ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ಮಂಗಳವಾರ ನಡೆದಿದೆ. ಅಲ್ಲೇ ಸಮೀಪವಿರುವ ರೈಲ್ವೆ ಹಳಿಯ ಪಕ್ಕದಲ್ಲಿನ ಬಯಲು ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು. ನಂತರ ಗಾಳಿ ಪ್ರಮಾಣ ಹೆಚ್ಚಾಗಿರುವುದರಿಂದ ಬೆಂಕಿ ಸುಮಾರು 500 ಮೀಟರ ದೂರ ವ್ಯಾಪಿಸಿ ಅಲ್ಲೇ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ತಗುಲಿದೆ. ಅಂಗಡಿಯ ಹಿಂಬಾಗದಲ್ಲಿರುವ ಪ್ಲಾಸ್ಟಿಕ್ ಸಾಮಾಗ್ರಿಗಳಿಗೆ ಬೆಂಕಿ ತಗಲುತ್ತಿದ್ದನಂತೆ ಬೆಂಕಿ ಕೆನ್ನಾಲಿಗೆ ಹೆಚ್ಚಾಗಿ ಹೊಗೆ ಹೆದ್ದಾರಿಯಲ್ಲಿ ಆವರಿಸಿಕೊಂಡ ಪರಿಣಾಮ ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಇದಕ್ಕೆ ಸ್ಥಳೀಯರು ಕೂಡ ಅಗ್ನಿಸಾಮಕ ಸಿಬ್ಬಂದಿ ಸಹಕರಿಸಿದ್ದಾರೆ. ಹಾಗೂ ನಗರ ಠಾಣೆಯ ಸಿಪಿಐ, ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಅಸ್ತವ್ಯಸ್ತಗೊಂಡ ವಾಹನ ಸಂಚಾರ ಸರಿಪಡಿಸಲು ಕ್ರಮಕೈಗೊಂಡಿದ್ದಾರೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,   ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version