Follow Us On

WhatsApp Group
Uttara Kannada
Trending

ರೈಸ್ ಮಿಲ್ ನಲ್ಲಿ ಅಗ್ನಿ ಅವಘಡ: ಯಂತ್ರಗಳು, ಇನ್ನಿತರ ಉಪಕರಣಗಳು ಬೆಂಕಿಗೆ ಆಹುತಿ

ಹೊನ್ನಾವರ: ರೈಸ್ ಮಿಲ್‌ವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕಟ್ಟಡ ಸಂಪೂರ್ಣ ಸುಟ್ಟುಕರಕಲಾದ ಘಟನೆ ತಾಲೂಕಿನ ಹೊಸಾಡ ರಂಗಿನಮೋಟಾದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ, ಸಾವು-ನೋವು ಸಂಭವಿಸಿಲ್ಲ. ರೈಸ್ ಮಿಲ್ ಯಂತ್ರಗಳು, ಇನ್ನಿತರ ಉಪಕರಣಗಳು ಅಗ್ನಿ ಅವಘಡಕ್ಕೆ ತುತ್ತಾಗಿ ಅಂದಾಜು ಮೂರು ಲಕ್ಷದಷ್ಟು ಹಾನಿ ಸಂಭವಿಸಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಕ್ಕದಲ್ಲಿನ ಮನೆಯ ಒಂದು ಭಾಗಕ್ಕೂ ಬೆಂಕಿ ತಗುಲಿತ್ತು. ಆದರೆ, ಬೆಂಕಿಯನ್ನು ಕೂಡಲೇ ನಂದಿಸಿರುವುದರಿಂದ ಇನ್ನಷ್ಟು ಅವಘಡ ತಪ್ಪಿದೆ. ಈ ರೈಸ್ ಮಿಲ್ ಸ್ಥಳೀಯ ನಿವಾಸಿ ಅನಂತ ರಾಮಚಂದ್ರ ಪೈ ಅವರಿಗೆ ಸೇರಿದೆ ಎನ್ನಲಾಗಿದೆ.

ಬೆಂಕಿ ನಂದಿಸುವಲ್ಲಿ ನೂರೈವತ್ತಕ್ಕು ಹೆಚ್ಚು ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದರು. ಜೀವನೋಪಾಯಕ್ಕಾಗಿ ರೈಸ್ ಮಿಲ್ ಅವಲಭಿಸಿದ ಕುಟುಂಬ ಇದೀಗ ಸಂಕಷ್ಟಕ್ಕೆ ಒಳಗಾಗಿದೆ. ಮೇಲ್ನೊಟಕ್ಕೆ ಶಾರ್ಟ್ರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ಒದಗಿಸಬೇಕೆಂದು ಕುಟುಂಬ ಸದಸ್ಯರು, ಸಾರ್ವಜನಿಕರು ಆಗ್ರಹಿಸಿದ್ದಾರೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,    ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777


ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button