Important
Trending

ಪತ್ನಿಯೊಂದಿಗೆ ಮನಸ್ತಾಪ: ಮನೆಬಿಟ್ಟು ತೆರಳಿದ ಗಂಡ: ತಂದೆಯಿಂದ ದೂರು ದಾಖಲು

ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು
ಮಾವನ ಮನೆಯಲ್ಲೇ ವಾಸಿದ್ದ ಗಂಡ
ಹಣದ ವಿಚಾರಕ್ಕೆ ಮನಸ್ತಾಪ ಶುರು
ಸ್ನೇಹಿತನಿಗೆ ಕರೆ ಮಾಡಿ ಹೇಳಿ ನಾಪತ್ತೆ

ಕಾರವಾರ: ಪತ್ನಿಯೊಂದಿಗೆ ಮನಸ್ತಾಪ ಮಾಡಿಕೊಂಡ ವ್ತಕಿಯೊಬ್ಬ ಮನೆಯಿಂದ ನಾಪತ್ತೆಯಾದ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಹಣ ವಿಷಯಕ್ಕೆ ಸಂಬಂಧಪಟ್ಟಂತೆ ಗಂಡ-ಹೆಂಡತಿ ಸಣ್ಣ ಜಗಳ ಮಾಡಿಕೊಂಡಿದ್ದು, ಇದೇ ವಿಷಯನ್ನೇ ಮನಸ್ಸಿಗೆ ಹಚ್ಚಿಕೊಂಡ ಗಂಡ ಮನೆ ಬಿಟ್ಟು ತೆರಳಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದ ಮಂಕಿ ಮೂಲದ ಗಂಗಾಧರ್ ಗಜಾನನ ಆಚಾರಿ ತನ್ನ ಮಾವನಮನೆಯಲ್ಲಿ ವಾಸವಿದ್ದ. ಆದರೆ, ಇತ್ತಿಚೆಗೆ ಗಂಡ-ಹೆಂಡತಿ ಹಣದ ವಿಷಯಕ್ಕೆ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಗಂಗಾಧರ ಗಜಾನನ ಆಚಾರಿ ತನ್ನ ಸ್ನೇಹಿತನಿಗೆ ಕರೆ ಮಾಡಿ, ಜೀವನ ಸಾಕಾಗಿ ಹೋಗಿದೆ. ಎಲ್ಲಿಯಾದರೂ ದೂರ ಹೋಗಬೇಕು ಎನಿಸುತ್ತಿದೆ ಎಂದು ಹೇಳಿ ದೂರವಾಣಿ ಕರೆಯನ್ನು ಕಟ್ ಮಾಡಿದ್ದಾನೆ.

ಕೂಡಲೇ ಸ್ನೇಹಿತ ಗಂಗಾಧರ ಆಚಾರಿ ಕುಟುಂಬದವರಿಗೆ ಈ ವಿಷಯನ್ನು ತಿಳಿಸಿದ್ದಾನೆ. ವಿಷಯ ತಿಳಿದ ಗಂಗಾಧರ್ ಆಚಾರಿಯವರ ತಂದೆ, ಮಗನ ಮೊಬೈಲ್ ಗೆ ಕಾಲ್ ಮಾಡಿದಾಗ ಸ್ವೀಚ್ ಆಫ್ ಎಂದು ಬಂದಿದೆ. ಇದರಿಂದ ಗಾಬರಿಗೊಂಡ ತಂದೆ , ಪೊಲೀಸ್ ಠಾಣೆಯಲ್ಲಿ ಮಗ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ. ಮನೆಯವರಲ್ಲಿ, ಕುಟುಂಬದವರಲ್ಲಿ ಆತಂಕ ಮನೆ ಮಾಡಿದೆ.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಭಟ್ಕಳ

Back to top button