Important
Trending

ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿ ಹಣಪಡೆದು ಮೋಸ: ಬಂಧಿತ ಆರೋಪಿಯಿಂದ 18 ಅಸಲಿ ಪಾಸ್‌ಪೋರ್ಟ್ ವಶಕ್ಕೆ

ದಾಂಡೇಲಿ: ಹಣ ಪಡೆದು ವಿದೇಶದಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚಿಸುತ್ತಿದ್ದ ಆರೋಪಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ ಓರ್ವನಿಗೆ ಟರ್ಕಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಾಗೂ ಅಲ್ಲಿಗೆ ತೆರಳಲು ವೀಸಾ ವ್ಯವಸ್ಥೆ ಮಾಡುವುದಾಗಿ 2.55 ಲಕ್ಷವನ್ನು ತನ್ನ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಂಡಿದ್ದ. ಆದರೆ, ವೀಸಾ, ನೌಕರಿ ಕೊಡಿಸಲಿಲ್ಲ. ಹಣವನ್ನೂ ಮರಳಿಸಿರಲಿಲ್ಲ. ಈ ಬಗ್ಗೆ ಮೋಸ ಹೋದ ವ್ಯಕ್ತಿ ನಿಯಾಝ್ ಹಮ್ಮದ್ ಎಂಬುವವರು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ದಾಂಡೇಲಿ ಪೊಲೀಸರು, ಆರೋಪಿಯಿರುವ ಜಾಗದ ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಯಿಂದ ಬೇರೆ ಬೇರೆ ಉದ್ಯೋಕಾಂಕ್ಷಿಗಳ 18 ಅಸಲಿ ಪಾಸ್‌ಪೋರ್ಟ್, ಮೂರು ಮೊಬೈಲ್ ಪೋನ್ಗಳು, ಒಂದು ಹಾರ್ಡ್ ಡ್ರೈವ್, ಲ್ಯಾಪ್ಟಾಪ್, ಆರು ಎ.ಟಿ.ಎಂ ಕಾರ್ಡ್ಗಳು, ಮೂರು ಪೆನ್ ಡ್ರೈವ್ಗಳು, ಏಳು ಸಿಮ್ ಕಾರ್ಡ್ಗಳು, ಏಳು ವಾಚ್ ಗಳು ಮತ್ತು ಬಂಗಾರದ ಆಭರಣಗಳನ್ನು ಜಪ್ತಿ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ರೋಣದ ಶರಣಬಸಪ್ಪ ಸಂಗನಬಸಪ್ಪ ಬಳಗೇರ (45) ಬಂಧಿತ ಆರೋಪಿ. ಪ್ರಸ್ತುತ ದಾಂಡೇಲಿಯ ಸುಭಾಶ್ ನಗರದಲ್ಲಿ ವಾಸವಿದ್ದ ಆತ, ಮೂವರಿಂದ ಹಣ ಪಡೆದು ವಂಚಿಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಆತನಿಗೆ ಹಣ ಕೊಟ್ಟು ಮೋಸ ಹೋಗಿರುವವರು ಇದ್ದರೆ ದಾಂಡೇಲಿ ನಗರ ಠಾಣೆಗೆ ಮಾಹಿತಿ ನೀಡಲು ಪೋಲೀಸರು ತಿಳಿಸಿದ್ದಾರೆ. ಡಿ.ವೈ.ಎಸ್.ಪಿ ಕೆ.ಎಲ್.ಗಣೇಶ, ಸಿ.ಪಿ.ಐ ಪ್ರಭು ಆರ್.ಗಂಗನಹಳ್ಳ, ಪಿ.ಎಸ್.ಐ ಮಹಾದೇವಿ ನಾಯ್ಕಕೋಡಿ, ಪಿ.ಎಸ್.ಐ ಯಲ್ಲಪ್ಪ.ಎಸ್, ಪೋಲೀಸ್ ಸಿಬ್ಬಂದಿ ಸೋಮಲಿಂಗ ಖಂಡೇಕರ್, ಪ್ರಶಾಂತ ನಾಯ್ಕ, ಭೀಮಪ್ಪ.ಎಚ್, ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ದಾಂಡೇಲಿ

Back to top button