Important
Trending

9 ತಿಂಗಳ ಮಗುವಿನೊಂದಿಗೆ ಕೆರೆ ಹಾರಿದ ಮಹಿಳೆ: ಹೃದಯವಿದ್ರಾವಕ, ಮನಕಲುಕುವ ಘಟನೆಯಿದು

ಮುಂಡಗೋಡ: ಜಲಾಶಯದಲ್ಲಿ ತಾಯಿ ಮಗುವಿನ ಜೊತೆ ಬಿದ್ದು ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮ ಡ್ಯಾಂ ಸಮೀಪ ನಡೆದಿದೆ. ಆದರೆ, ಆತ್ಮಹತ್ಯೆಗೆ ಪ್ರಯತ್ನಪಟ್ಟ ತಾಯಿ ಬದುಕುಳಿದಿದ್ದಾಳೆ. ಘಟನೆಯಲ್ಲಿ 9 ತಿಂಗಳ ಗಂಡು ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಬೇರೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇದನ್ನು ತಿಳಿದ ಗಂಡ ಬುದ್ಧಿವಾದ ಹೇಳಿದ್ದ. ಅತ್ತೆಯೂ ಬುದ್ದಿವಾದ ಹೇಳಿದ್ದಳು ಎನ್ನಲಾಗಿದೆ. ಆದ್ರೆ, ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆ, ಮಗನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡ ಇಲ್ಲದಿರುವಾಗ ನನ್ನ ಸೊಸೆ ಬೇರೆಬ್ಬರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಳು. ಈ ಘಟನೆಯ ಬಳಿಕ ಅವಳಿಗೆ ಬುದ್ಧಿವಾದ ಹೇಳಿ, ಮತ್ತೆ ಹೀಗೆ ಮಾಡಬಾರದೆಂದು ಹೇಳಲಾಗಿತ್ತು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಹೀಗೆ ಮಾಡಿದ್ದಾಳೆ. ಘನಟಯೆಲ್ಲಿ ಮೊಮ್ಮಗ ಮೃತಪಟ್ಟಿದ್ದಾನೆ ಎಂದು ಮೃತ ಅಜ್ಜಿ ದೂರು ದಾಖಲಿಸಿದ್ದಾಳೆ.

ಮೃತ ಮಗುವನ್ನು ರಾಮು ಶಳಕೆ ಎಂದು ತಿಳಿದುಬಂದಿದೆ. ತಾಯಿಯನ್ನು ಊರ ಜನರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೃತ ಮಗುವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನಾರಾಯಣ ತಳೇಕರ, ಲಕ್ಷ್ಮಣ ಪಟಗಾರ, ಬಸವರಾಜ ಇಂಚಲ, ಬಸವರಾಜ, ಮಂಜುನಾಥ ಪಟಗಾರ, ಸಂತೋಷ ಪಾಟೀಲ, ಶಿವಾಜಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ )  ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button