ಮೀನಿನ ಲಾರಿಯಲ್ಲಿ ಅಕ್ರಮ ಮಧ್ಯ ಸಾಗಾಟ: 300ಕ್ಕೂ ಖಾಲಿ ಕ್ರೇಟ್ ಗಳ ನಡುವೆ ಇತ್ತು ಅಪಾರ ಹೆಂಡ

ಕಾರವಾರ : ಮೀನಿನ ಲಾರಿಯಲ್ಲಿ 9 ಲಕ್ಷ ರೂ ಮೌಲ್ಯದ ಅಕ್ರಮ‌ ಗೋವಾ ಮದ್ಯ‌ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಸಿಬ್ಬಂದಿ ಲಾರಿ ಸಹಿತ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ಇಂದು ಮುಂಜಾನೆ ಕಾರವಾರದ ಮಾಜಾಳಿ ಗೇಟ್ ಬಳಿ ನಡೆದಿದೆ.

ಗೋವಾದಿಂದ ಆಗಮಿಸಿದ ಮೀನಿನ‌ ಲಾರಿಯಲ್ಲಿ 300 ಕ್ಕೂ ಹೆಚ್ಚು ಖಾಲಿ ಕ್ರೇಟ್ ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ ಗಳ ಮಧ್ಯೆ ಸುಮಾರು 505 ಲೀಟರ್ ನ 9.13 ಲಕ್ಷ ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದು, ಚಾಲಕ ಆಂದ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಸಹಿತ ವಶಕ್ಕೆ ಪಡೆದಿದ್ದಾರೆ.

ಜತೆಗೆ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ಮೌಲ್ಯದ ಪ್ಲಾಸ್ಟಿಕ್ ಕ್ರೇಟ್ ಸೇರಿ 25 ಲಕ್ಷ ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ )  ಮೊಬೈಲ್ : 9964108888,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Exit mobile version