ಲಂಚ ಪಡೆದ ಹಣದಲ್ಲಿ ಇನ್ನೂರು ರೂಪಾಯಿ ಡಿಸ್ಕೌಂಟ್! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಈ ಲಂಚಬಾಕನ ಆಫರ್ ಹೇಗಿದೆ ನೋಡಿ?

ಸಂಘದ ನೋಂದಣಿಗೆ ಹಣ‌ಕೇಳಿದ್ದ
ಮೂರು ಸಾವಿರ ರೂಪಾಯಿಗೆ ಬೇಡಿಕೆ
ಕೊನೆಗೆ 1,500 ರೂಪಾಯಿಗೆ ಒಪ್ಪಿಗೆ
ಅದರಲ್ಲೂ ಡಿಸ್ಕೌಂಟ್ ಕೊಟ್ಟ ಲಂಚಬಾಕ!

ಕಾರವಾರ: ಸಂಘದ ನೊಂದಣಿ ಮಾಡಲು 1,500 ರೂ ಹಣ ಪಡೆಯುವಾಗ  ಅಧಿಕಾರಿಯೋರ್ವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಕಾರವಾರದ ಸಹಕಾರಿ ಸಂಘಗಳ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಸಹಕಾರಿ ಸಂಘಗಳ ಹಿರಿಯ ನಿಬಂಧಕ ಭಾಸ್ಕರ್ ನಾಯ್ಕ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಹಣಕೋಣದ ಸುನೀಲ್ ನಾಯ್ಕ ಎಂಬುವವರು ಶ್ರೀ ಸಾತೇರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಯುತ್ ಕ್ಲಬ್ ಹಣಕೋಣ ಸಂಘದ ನೋಂದಣಿಗೆ ತೆರಳಿದ್ದರು. ಆದರೆ ಸಂಘದ ನೋಂದಣಿಗಾಗಿ ಅಧಿಕಾರಿ 3 ಸಾವಿರ ರೂ ಬೇಡಿಕೆ ಇಟ್ಟಿದ್ದ. ಕೊನೆಗೆ 1500 ರೂ ಕೊಡುವುದಾಗಿ ಮಾತುಕತೆ ನಡೆಸಿದ್ದರು.

ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದ. ಅದರಂತೆ ಕಾರ್ಯಾಚರಣೆಗೆ ಪ್ಲ್ಯಾನ್ ರೂಪಿಸಿದ್ದ ಎಸಿಬಿ ಡಿವೈಎಸ್ಪಿ ಮಂಜುನಾಥ ಕೌರಿ ಅವರ ತಂಡ ಇಂದು ಒಂದೂವರೆ ಸಾವಿರ ಲಂಚ ಹಣ ನೀಡುವಾಗ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾರವಾರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳದ ನಿವಾಸಿಯಾಗಿರುವ ಈ ಲಂಚಬಾಕ  ಅಧಿಕಾರಿ ಲಂಚದ ಹಣ ದಲ್ಲೂ ಡಿಸ್ಕೌಂಟ್ ನೀಡಿದ್ದಾನೆ. ಮೊದಲು ನೊಂದಣಿ ಶುಲ್ಕ ಸೇರಿ ಮೂರುಸಾವಿರ ಹಣ ಲಂಚ ಕೇಳಿದ್ದರಂತೆ. ಮೊದಲು ಶುಲ್ಕದ ಮೊತ್ತ ಒಂದೂವರೆ ಸಾವಿರ ನೀಡಲಾಗಿತ್ತು. ನಂತರ ಲಂಚದ ಮೊತ್ತದ ಮೊದಲ ಕಂತಿನ ಒಂದೂವರೆ ಸಾವಿರ ರೂ. ನನ್ನು ನೀಡಲಾಗಿತ್ತು. ಈ ವೇಳೆ ಇನ್ನೂರು ರೂಪಾಯಿಯನ್ನು ಲಂಚದ ಹಣದಲ್ಲಿ ಮರಳಿಸಿ ಕಡಿಮೆ ತೆಗೆದುಕೊಂಡಿರುವುದಾಗಿ ದೂರುದಾರರಿಗೆ ಹೇಳಿದ್ದನಂತೆ!

ಎ.ಸಿಬಿ ಡಿ.ಎಸ್.ಬಿ ಮಂಜುನಾಥ ಕೌರಿ ಇವರ ಮಾರ್ಗದರ್ಶನದಲ್ಲಿ ,ಅಲೀ ಶೇಖ್.ಪಿ.ಐ ,ಅನಿಸ್ ಅಹ್ಮದ್ ಮುಜಾವರ್, ಹಾಗೂ ಸಹಾಯಕ ಸಿಬ್ಬಂದಿಗಳಾದ ರಾಜೇಶ್ ಪ್ರಭು,ಕೃಷ್ಣ,ಗಜೇಂದ್ರ,ಶಿವಕುಮಾರ್ ,ಮುಂಜುನಾಥ್ ,ಮೆಹಬೂಬ್ ಅಲಿ ದಾಳಿಯಲ್ಲಿ ಭಾಗವಹಿಸಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಕಾರವಾರ

Exit mobile version