Follow Us On

WhatsApp Group
Important
Trending

ಮಧ್ಯರಾತ್ರಿ ವರೆಗೂ ಕಾಡಿನಲ್ಲಿ ವಿದ್ಯಾರ್ಥಿನಿ ಅಡಗಿ ಕುಳಿತಿದ್ದೇಕೆ? ವೈದ್ಯಕೀಯ ಪರೀಕ್ಷೆಯಲ್ಲಿ ಅಸಲಿಯತ್ತು ಬಯಲು

ಯಲ್ಲಾಪುರ: ವಿದ್ಯಾರ್ಥಿಯೋರ್ವಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಹೀಗೆ ಹುಡುಕುತ್ತಿರುವಾಗ ತಡರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತಂಕ ಮತ್ತು ಹಲವು ಅನುಮಾನಕ್ಕೆ ದಾರಿಮಾಡಿಕೊಟ್ಟಿತ್ತು. ಆದರೀಗ ಈ ನಿಗೂಢ ರಹಸ್ಯ ಬಯಲಾಗಿದೆ. ತನಿಖೆ ಆರಂಭಿಸಿದ ಪೊಲೀಸರು ಸತ್ಯವನ್ನು ಬಯಲಿಗೆಳೆದಿದ್ದಾರೆ.

ಶಾಲೆಯಲ್ಲಿ ಕೊಟ್ಟ ಹೋಮ್ ವರ್ಕ್ ತಪ್ಪಿಸಿಕೊಳ್ಳಲು ವಿದ್ಯಾರ್ಥಿನಿ ಅತ್ಯಾಚಾರದ ನಾಟಕವಾಡಿದ್ದು ಬೆಳಕಿಗೆ ಬಂದಿದೆ. ಪಾಲಕರ ಕಣ್ತಿಪ್ಪಿಸಿ ಕಾಡಿನಲ್ಲಿ ಅಡಗಿ ಕುಳಿತಿದ್ದು ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಕಥೆ ಹಣೆದಿದ್ದಳು. ವೈದ್ಯಕೀಯ ಪರೀಕ್ಷೆ ನಡೆಸಿದಾಗ ಅಸಲಿ ಕತೆ ಗೊತ್ತಾಗಿದೆ ಹತ್ತನೇ ತರಗತಿ ಓದುತಿದ್ದ ವಿದ್ಯಾರ್ಥಿನಿ ಸರಿಯಾಗಿ ಹೋಂ ವರ್ಕ್ ಮಾಡೋದಿಲ್ಲ ಎಂದು ಮುಖ್ಯ ಶಿಕ್ಷಕ ಪಾಲಕರಿಗೆ ದೂರು ನೀಡಿದ್ದರು. ಹೀಗಾಗಿ ವಿದ್ಯಾರ್ಥಿನಿಯನ್ನು ಪೋಷಕರು ತರಾಟೆಗೆ ತೆಗೆದುಕೊಂಡಿದ್ದರು.

ಪೋಷಕರು ಬೈದಿದ್ದರಿಂದ ಕೋಪಗೊಂಡ ವಿದ್ಯಾರ್ಥಿನಿ ಮನೆಯ ಹಿಂಭಾಗದಲ್ಲಿರುವ ಕಾಡಿನಲ್ಲಿ ಅವಿತು ಕುಳಿತಿದ್ದಳು. ಸಂಜೆ ವೇಳೆ ಎಷ್ಟು ಹೊತ್ತಾದರೂ ವಿದ್ಯಾರ್ಥಿನಿ ಮನೆಗೆ ಬಾರದ್ದರಿಂದ ಪೋಷಕರು ಭೀತಿಗೊಳಗಾಗಿದ್ದಾರೆ. ವಿದ್ಯಾರ್ಥಿನಿಯ ಅಪಹರಣ ಆಗಿರಬೇಕೆಂದು ಯೋಚಿಸಿ ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದರು.

ಹೌದು, ಯಲ್ಲಾಪುರದ ನಂದೊಳ್ಳಿಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಸಂಜೆ ಶಾಲೆಯಿಂದ ಮಾಗೋಡ ಬಸ್‌ನಲ್ಲಿ ಮನೆಗೆ ಬರುತ್ತಿದ್ದಳು. ಮನೆ ಹತ್ತಿರದ ಬಸ್ ಸ್ಟಾಪ್ ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಬಸ್ ಸ್ಟಾಪ್ ನಲ್ಲಿ ಇಳಿದ ವಿದ್ಯಾರ್ಥಿನಿಗೆ ಬೈಕ್‌ನಲ್ಲಿ ಬಂದ ಮೂವರು ವಿಳಾಸ ಕೇಳಿದ್ದಾರಂತೆ. ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ತನ್ನನ್ನು ಅಪಹರಿಸಿದ್ದರು ವಿದ್ಯಾರ್ಥಿನಿ ಹೇಳಿದ್ದಳು. ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊoದಿಗೆ ಚರ್ಚಿಸಿದ್ದರು. ಬಳಿಕ ತನಿಖೆ ಆರಂಬಿಸಿದಾಗ ಸತ್ಯ ಹೊರಬಿದ್ದಿದೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರವಾಗಿಲ್ಲ ಎಂಬ ವರದಿ ಬಂದಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಯಲ್ಲಾಪುರ

Back to top button