ಅಯೋದ್ಯೆ ಶ್ರೀರಾಮನ ಮಂದಿರ ನಿರ್ಮಾಣಕ್ಕೆ ತಾಲೂಕಿನಲ್ಲಿಯೆ ಅತಿ ಹೆಚ್ಚು ದೇಣಿಗೆ ನೀಡಿ ಭಕ್ತಿ ಮೆರೆದ ಮಂಕಾಳ ವೈದ್ಯ

ಭಟ್ಕಳ: ರಾಮ ಮಂದಿರ ನಿರ್ಮಾಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯ ವೈಯಕ್ತಿಕವಾಗಿ ಒಂದು ಲಕ್ಷಕ್ಕೂ ಅಧಿಕ ದೇಣಿಗೆ ನೀಡುವ ಮೂಲಕ ತಾಲೂಕಿನಲ್ಲಿಯೆ ಮಂದಿರ ನಿರ್ಮಾಣಕ್ಕೆ ಅತಿ ಹೆಚ್ಚು ದೇಣಿಗೆ ನೀಡಿದ ಸಾಲಿಗೆ ಮೊದಲಿಗರಾಗಿದ್ದಾರೆ. ಅಯೋದ್ಯೆಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ತಾಲೂಕಿನಾದ್ಯಂತ ಭರದಿಂದ ಸಾಗುತ್ತಿದೆ. ವಿವಿಧ ಸಂಘಟನೆಗಳು ಮನೆಮನೆಗೆ ತೆರಳಿ ದೇಣಿಗೆ ಸಂಗ್ರಹಿಸುತ್ತಿವೆ. ಈ ಸಂದರ್ಬದಲ್ಲಿ ರಾಮ ಜನ್ಮ ಭೂಮಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶಂಕರ ಶೆಟ್ಟಿ ಇವರ ತಂಡ ಮಾಜಿ ಶಾಸಕ ಮಂಕಾಳ ವೈದ್ಯ ಮನೆಗೆ ತೆರಳಿದೆ.

ಸಂಘಟನೆಯ ಸದಸ್ಯರನ್ನು ಆದರದಿಂದ ಬರಮಾಡಿಕೊಂಡು ಒಂದು ಲಕ್ಷದ ೮ ರೂಗಳನ್ನು ದೇಣಿಗೆಯಾಗಿ ನೀಡಿ ಶುಭ ಹಾರೈಸಿ, ಚೆಕ್‌ನ್ನು ಹಸ್ತಾಂತರಿಸಿದರು. ಜನ್ಮ ಭೂಮಿ ಘಟಕದ ವತಿಯಿಂದ ಪರಮೇಶ್ವರ ಕೋಣಿಮನೆ, ಜಿಎಸ್‌ಬಿ ಸಮಾಜದ ಪ್ರಮುಖ ನರೇಂದ್ರ ನಾಯಕ, ಸುನೀಲ ಕಾಮತ ಇದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version