Important
Trending

ಬೈಕ್ ಸ್ಕೀಡ್ ಆಗಿ ನೆಲಕ್ಕುರುಳಿದ ದಂಪತಿ, ಮಗು: ಮಾನವೀಯತೆ ಮೆರೆದ ಸಚಿವರು: ವಿಡಿಯೋದಲ್ಲಿ ಸೆರೆಯಾಗಿದೆ ಈ ದೃಶ್ಯ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಹತ್ತಿರವಿರುವ ಬಡಗಣಿ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿ, ದಂಪತಿ ಮತ್ತು ಮಗು ಕೆಳಗೆ ಬಿದ್ದಿದ್ದರು. ಬೈಕ್ ಸ್ಕೀಡ್ ಆಗಿ ದಂಪತಿ ಮತ್ತು ಮಗು ಬಿದ್ದಿರುವ ವೇಳೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇದೇ ಮಾರ್ಗದಲ್ಲಿ ತೆರಳುತ್ತಿದ್ದರು. ಇದನ್ನು ಗಮನಿಸಿದ ಸಚಿವರು, ಕೂಡಲೇ ಕಾರು ನಿಲ್ಲಿಸಿ, ತಮ್ಮದೇ ಕಾರಿನಲ್ಲಿ ಕರೆದುಕೊಂಡು ಬಂದು, ಆಂಬುಲೆನ್ಸ್ ಗೆ ತಲುಪಿಸಿ, ತಾಲೂಕಾಆಸ್ಪತ್ರಗೆ ದಾಖಲಿಸಲು ಹೇಳಿ ಮಾನವೀಯತೆ ಮೆರೆದಿದ್ದಾರೆ.

ಕುಮಟಾ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರನ್ನು ಕುಮಟಾ ಹಳೆಮೀನುಪೇಟೆ ನಿವಾಸಿಗಳು ಎಂದು ಗುರುತಿಸಲಾಗಿದ್ದು,ಬಾಲಕನ ತಲೆಗೆ ಗಂಭೀರವಾದ ಗಾಯವಾಗಿದೆ ಎನ್ನಲಾಗಿದೆ. ಈ ದುರ್ಘಟನೆ ನಡೆದ ಕೂಡಲೇ ಸಚಿವರು, ಕೂಡಲೇ ಕಾರು ನಿಲ್ಲಿಸಿ, ತಮ್ಮದೇ ಕಾರಿನಲ್ಲಿ ಕರೆದುಕೊಂಡು ಬಂದು, ಆಂಬುಲೆನ್ಸ್ ಗೆ ತಲುಪಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಕುಮಟಾ

Back to top button