ಪಾರ್ಶ್ವವಾಯುವಿಗೆ ತುತ್ತಾದ ರೋಗಿಯನ್ನು 5 ಕಿಲೋಮೀಟರ್ ದೂರ ಹೊತ್ತಿಕೊಂಡೇ ತೆರಳಿದರು: ಎಂಥ ವಿಪರ್ಯಾಸ ನೋಡಿ

70 ವರ್ಷದ ವೃದ್ಧ ಪಾರ್ಶ್ವವಾಯುವಿಗೆ ತುತ್ತಾಗಿದ್ದ
ಈ ಕುಗ್ರಾಮಕ್ಕೆ ರಸ್ತೆ ಸಂಪರ್ಕವೇ ಇಲ್ಲ
ಐದು ಕೀಲೋಮೀಟರ್ ನಡೆಯುವುದು ಅನಿವಾರ್ಯ
ಈ ಊರಿಗೆ ಆಂಬ್ಯುಲೆನ್ಸ್ ತರುವುದು ಅಸಾಧ್ಯ

ಕಾರವಾರ: ರಸ್ತೆ ವ್ಯವಸ್ಥೆ ಇಲ್ಲದ್ದರಿಂದ ರೋಗಿಯನ್ನು 5 ಕಿಲೋಮೀಟರ್ ದೂರ ಜೋಲಿಯಲ್ಲೇ ಹೊತ್ತೊಯ್ದು ಆಸ್ಪತ್ರೆ ಸೇರಿಸಿರುವ ಮನಕಲಕುವ ಘಟನೆ ಅಂಕೋಲಾದಲ್ಲಿ ನಡೆದಿದೆ.ತಾಲೂಕಿನ ವರೀಲಬೇಣಾ ಗ್ರಾಮದ 70 ವರ್ಷದ ನೂರಾ ಪೊಕ್ಕ ಗೌಡ ಎಂಬುವವರು ನಿನ್ನೆ ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಬೇಕಾಗಿದ್ದು ವರೀಲಬೇಣಾ ಕುಗ್ರಾಮವಾದ್ದರಿಂದ ರಸ್ತೆ ಸಮರ್ಪಕವಾಗಿ ಇಲ್ಲದ ಕಾರಣ ಐದು ಕಿಲೋಮೀಟರ್ ದೂರದ ಅಂಕೋಲಾ ಪಟ್ಟಣಕ್ಕೆ ಕುರ್ಚಿಯಲ್ಲಿ ಕೂರಿಸಿ ಕಾಡಿನ ದಟ್ಟ ಹಾದಿಯಲ್ಲಿ ಕುಟುಂಬದವರು ಜೋಲಿಮಾಡಿ ಕರೆತಂದಿದ್ದಾರೆ.

ಗುಡ್ಡಗಾಡು ಪ್ರದೇಶವಾದ್ದರಿಂದ ಆಂಬ್ಯುಲೆನ್ಸ್ ಬರುವುದು ಸಹ ಸಾಧ್ಯವಿಲ್ಲದ್ದರಿಂದ ಹೊತ್ತೊಯ್ಯಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಹಲವು ಭಾಗದಲ್ಲಿ ನಗರ ಸಮೀಪವಿದ್ದರೂ ಸಹ ರಸ್ತೆಗಳು ಸಮರ್ಪಕವಾಗಿ ಇಲ್ಲದ ಕಾರಣ ಆಂಬ್ಯುಲೆನ್ಸ್ ಬರುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಇದ್ದು ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕುಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಡುವ ಕೆಲಸ ಮಾಡಬೇಕಾಗಿದೆ ಅಂತಾ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಅಂಕೋಲಾ

Exit mobile version