Important
Trending

ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಶಸ್ತ್ರ ಚಿಕಿತ್ಸೆ: ದೀರ್ಘಾವಧಿಯ ವಿಶ್ರಾಂತಿ ಸೂಚಿಸಿದ ವೈದ್ಯರು

ಮಾಜಿ ಕೇಂದ್ರ ಸಚಿವರು, ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ,‌ ಅನಾರೋಗ್ಯದ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶಟ್ಟಿ ರವರು, ಸಂಸದ ಅನಂತಕುಮಾರ ಹೆಗಡೆಯವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದರು.ಇತ್ತೀಚೆಗೆ ಸಂಸದರಿಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ , ತಜ್ಞರು ತಕ್ಷಣವೇ ಸೂಕ್ತ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು.

ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲವು ಕಾಲ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಈ ಮೂಲಕ ತಿಳಿಸುತ್ತಿದ್ದೇನೆ, ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 27 ರಂದು ಮಂಗಳೂರಿನಲ್ಲಿ ಮೊಣಕಾಲಿನ ಚಿಕಿತ್ಸೆಗೆ ಒಳಗಾಗಿರುವ ಸಂಸದ ಅನಂತಕುಮಾರ್ ಹೆಗಡೆ ಮಂಗಳೂರಿನಿಂದ ದೆಹಲಿಗೆ ತೆರಳಿದ್ದು ,ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button