ದಿ.10 ರಂದು ಮೋಹನ ನಾಯ್ಕ ಕೂಜಳ್ಳಿ ಅವರ ‘ಉತ್ತರ ಕನ್ನಡದಲ್ಲಿ ಕುಮಾರರಾಮ’ ಚರಿತ್ರೆ ಮತ್ತು ಅಧ್ಯಯನ ಪುಸ್ತಕ ಲೋಕಾರ್ಪಣೆ

ಕುಮಟಾ: ಇಲ್ಲಿಯ ಕೂಜಳ್ಳಿಯ ಯಕ್ಷಗಾನ ಕಲಾವಿದ ಮೋಹನ ನಾಯ್ಕರ ‘ಗಣರಾಜ’ ಮನೆಯಂಗಳದಲ್ಲಿ ದಿ.10 ರಂದು ಇಳಿಹೊತ್ತು 3.30ಕ್ಕೆ ಅವರು ಬರೆದ ಚರಿತ್ರೆ ಮತ್ತು ಅಧ್ಯಯನ ಪುಸ್ತಕ ‘ಉತ್ತರ ಕನ್ನಡದಲ್ಲಿ ಕುಮಾರರಾಮ’ ಲೋಕಾರ್ಪಣೆಗೊಳ್ಳಲಿದೆ. ಹಿರಿಯ ಜಾನಪದ ವಿದ್ವಾಂಸ, ಸಾಹಿತಿ ಎನ್.ಆರ್.ನಾಯಕ ಹೊನ್ನಾವರ ಇವರು ಪುಸ್ತಕ ಅನಾವರಣಗೊಳಿಸಲಿದ್ದಾರೆ. ಕೃತಿಯ ಕುರಿತು ಸಾಹಿತ್ಯಚಿಂತಕ ಎನ್.ಆರ್.ಗಜು ಮಾತನಾಡಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರಿವಿಂದ ಕರ್ಕಿಕೋಡಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿಗಳಾದ ಸುಮುಖಾನಂದ ಜಲವಳ್ಳಿ, ಶಾರದಾ ಭಟ್ಟ ಹಾಗೂ ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಎಸ್.ವಿ.ಹೆಗಡೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಾಹಿತ್ಯಾಭಿಮಾನಿಗಳು, ಕುಮಾರರಾಮನ ಬಗೆಗಿನ ಸಹಜ ಕುತೂಹಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕೃತಿಕಾರ ಮೋಹನ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Exit mobile version