Follow Us On

WhatsApp Group
Focus News
Trending

ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಾಹನ ನಡುರಸ್ತೆಯಲ್ಲಿ ಪಲ್ಟಿ: 10 ಪ್ರಯಾಣಿಕರಿಗೆ ಗಾಯ

ವಾಹನದ ಹಿಂಬದಿಯ ಟಾಯರ್ ಬ್ಲಾಸ್ಟ್ ಆಗಿದ್ದು, ಚಾಲಕ ವಾಹನವನ್ನು ನಿಯಂತ್ರಿಸಲು ಆಗಿಲ್ಲ. ಸುಮಾರು 50 ಫೀಟ್ ಹಿಂದೆಯೇ ಟಾಯರ್ ಬ್ಲಾಸ್ಟ್ ಆಗಿದ್ದು, ಚಲಿಸುತ್ತಿದ್ದ ಮಾರ್ಗದ ವಿರುದ್ಧ ದಿಕ್ಕಿನಲ್ಲಿ ತಿರುಗಿ ವಾಹನ ಬಿದ್ದಿದೆ.

ಹೊನ್ನಾವರ: ಅವರೆಲ್ಲರೂ ಸಂಬಂಧಿಕರ ಮನೆಗೆ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಆದರೆ, ವಿಧಿಯಾಟದಲ್ಲಿ ಹೋಗಿದ್ದು ಮಾತ್ರ ಆಸ್ಪತ್ರೆಗೆ. ಹೌದು, ಚಾಲನೆಯಲ್ಲಿದ್ದ ವಾಹನದ ಟಾಯರ್ ಬ್ಲಾಸ್ಟ್ ಆದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಪಲ್ಟಿಯಾದ ಘಟನೆ ತಾಲೂಕಿನ ಖರ್ವಾ -ಯಲಗುಪ್ಪ ಸಮೀಪ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ವಾಹನದಲ್ಲಿ ಒಟ್ಟು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು . ಇವರಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ.

ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಹೊನ್ನಾವರ ಮಾರ್ಗವಾಗಿ ಕುಮಟಾಕ್ಕೆ ತೆರಳುತ್ತಿದ್ದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪಲ್ಟಿಯಾಗಿದೆ. ವಾಹನದ ಹಿಂಬದಿಯ ಟಾಯರ್ ಬ್ಲಾಸ್ಟ್ ಆಗಿದ್ದು, ಚಾಲಕ ವಾಹನವನ್ನು ನಿಯಂತ್ರಿಸಲು ಆಗಿಲ್ಲ. ಸುಮಾರು 50 ಫೀಟ್ ಹಿಂದೆಯೇ ಟಾಯರ್ ಬ್ಲಾಸ್ಟ್ ಆಗಿದ್ದು, ಚಲಿಸುತ್ತಿದ್ದ ಮಾರ್ಗದ ವಿರುದ್ಧ ದಿಕ್ಕಿನಲ್ಲಿ ತಿರುಗಿ ವಾಹನ ಬಿದ್ದಿದೆ.

ಘಟನಾ ಸ್ಥಳಕ್ಕೆ ಪಿಎಸ್‍ಐ ಶಶಿಕುಮಾರ್, ಹಾಗು ಸಿಬ್ಬಂದಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲಿಸಲು ನೆರವಾದರು. ನಡುರಸ್ತೆಯಲ್ಲೇ ವಾಹನ ಬಿದ್ದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಇದನ್ನು ಸರಿಪಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Back to top button