Big News
Trending

ಮದುವೆ ನಿಶ್ಚಯವಾಗಿದ್ದ ಯುವತಿ ಸಾವು: ಹುಡುಗನ ಮನೆಗೆ ತೆರಳಿ ಮಾತುಕತೆ ಮುಗಿಸಿ ಬಂದಿದ್ದರು: ಮದುವೆಗಾಗಿ ಆಭರಣಗಳನ್ನೂ ಖರೀದಿಸಿಟ್ಟಿದ್ದರು

ತೋಟದ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ದುರಂತವೊoದು ಸಂಭವಿಸಿದ್ದು, ನಾಲ್ವರು ಕೂಲಿ ಕಾರ್ಮಿಕರು ಮಣ್ಣಲ್ಲಿ ಮಣ್ಣಾಗಿದ್ದಾರೆ. ಸಾವನ್ನಪ್ಪಿದವರಲ್ಲಿ ಹುಡಗನ ಮನೆಯವರೊಂದಿಗೆ ಮದುವೆ ಮಾತುಕತೆ ನಡೆಸಿಕೊಂಡು ಬಂದಿದ್ದ ಈ ಯುವತಿ ಕೂಡಾ ಒಬ್ಬಳು.

ಯಲ್ಲಾಪುರ: ಆಕೆಗೆ ಮದುವೆ ನಿಶ್ಚಯವಾಗಿತ್ತು. ಸುಖ ಜೀವನದ ಸುಂದರ ಕನಸು ಕಂಡಿದ್ದಳು. ಆದರೆ, ಆಕೆಯ ಕನಸುಗಳೆಲ್ಲ ಮಣ್ಣುಪಾಲಾಗಿದೆ. ಹೌದು, ಯಲ್ಲಾಪುರದ ಸಂತೇಬೈಲ್ ನ ತೋಟದ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ದುರಂತವೊoದು ಸಂಭವಿಸಿದ್ದು, ನಾಲ್ವರು ಕೂಲಿ ಕಾರ್ಮಿಕರು ಮಣ್ಣಲ್ಲಿ ಮಣ್ಣಾಗಿದ್ದಾರೆ.

ಸಾವನ್ನಪ್ಪಿದವರಲ್ಲಿ ಹುಡಗನ ಮನೆಯವರೊಂದಿಗೆ ಮದುವೆ ಮಾತುಕತೆ ನಡೆಸಿಕೊಂಡು ಬಂದಿದ್ದ ಈ ಯುವತಿ ಕೂಡಾ ಒಬ್ಬಳು. ಈ ದುರಂತ ಸಂಭವಿಸಿದ ದಿನದಂದೆ ಸಾವನ್ನಪ್ಪಿದ ಭಾಗ್ಯಶ್ರೀ ಎಂಬುವವರ ಮದುವೆ ಮಾತುಕತೆಯನ್ನು ಕುಟುಂಬಸ್ಥರು ಕೊಲ್ಲಾಪುರದ ಹುಡುಗನ ಮನೆಗೆ ತೆರಳಿ ಮುಗಿಸಿ ಬಂದಿದ್ದರು. ಏಪ್ರಿಲ್ ನಲ್ಲಿ ಮದುವೆಗೆ ದಿನ ನಿಗದಿಪಡಿಸಿದ್ದಲ್ಲದೇ, ಆಕೆಯ ಮದುವೆಗಾಗಿ ಆಭರಣಗಳನ್ನೂ ಖರೀದಿಸಿಟ್ಟಿದ್ದರು ಎನ್ನಲಾಗಿದೆ.

ಕಳೆದ 15 ದಿನಗಳಿಂದ ಯಲ್ಲಾಪುರದ ಸಂತೆಬೈಲ್ ನ ಮಂಜುನಾಥ ಭಟ್ಟ ಎನ್ನುವವರ ಮನೆಗೆ ಏಳು ಮಂದಿ ಕೆಲಸಕ್ಕೆ ತೆರಳುತ್ತಿದ್ದರು. ಕೆಲಸ ಮುಗಿಸಿ ನೀರು ಕುಡಿಯಲು ಧರೆಯ ಕೆಳಗೆ ಕುಳಿತಿದ್ದರು. ಈ ವೇಳೆ ಧರೆ ಕುಸಿದಿದೆ. ಮಣ್ಣು ಕುಸಿದಿದ್ದು ಭಾಗ್ಯಶ್ರೀ (21), ಲಕ್ಷ್ಮೀ (38), ಸಂತೋಷ್ (18) ಹಾಗೂ ಮಾಳು ಡೋಯಿಪಡೆ (21) ಎಂಬುವವರು ಮಣ್ಣಿನಲ್ಲಿ ಹುದುಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದೀಗ ಮೃತದೇಹಗಳನ್ನು ಮಣ್ಣಿನಿಂದ ತೆಗೆದು ಯಲ್ಲಾಪುರದ ಸರ್ಕಾರಿ ಶವಗಾರಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಆಸ್ಪತ್ರೆ ಮುಂದೆ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ. ಹೊಟ್ಟೆಪಾಡಿಗಾಗಿ ಕೂಲಿಗೆ ತೆರಳಿದ ಮಕ್ಕಳು, ಮದುವೆ ನಿಶ್ಚಯವಾದ ಯುವತಿ ಸೇರಿ ನಾಲ್ವರು ಅಮಾಯಕರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಬಡಕೂಲಿ ಕಾರ್ಮಿಕರ ಕುಟುಂಬದವರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Back to top button