ಬೈಕ್ ಖರೀದಿಸಿ, ದುಡ್ಡು ಕೊಡದೆ ತೆಗೆದುಕೊಂಡು ಪರಾರಿಯಾಗಿದ್ದ | ಪೊಲೀಸ್ ತನಿಖೆಯಲ್ಲಿ ಈತನ ಮತ್ತಷ್ಟು ದುಷ್ಕೃತ್ಯ ಬಯಲು

ನಿಮ್ಮ ಹೊಂಡಾ ಡಿಯೋಗೆ 75,000₹ ಕೊಡುತ್ತೇನೆಂದು ಹೇಳಿ ಬೈಕ್ ತೆಗೆದುಕೊಂಡು ಹೋದವನು ತಲೆ ಮರೆಸಿಕೊಂಡಿದ್ದ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಗೋಕರ್ಣ: ನಿಮ್ಮ ಬೈಕ್ ಗೆ 75 ಸಾವಿರ ಕೊಡುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಆಸಾಮಿಯನ್ನು ಪೊಲೀಸರು ಕಂಬಿ ಹಿಂದೆ ನಿಲ್ಲಿಸಿದ್ದಾರೆ. ಶಿವಮೊಗ್ಗ ಸಾಗರದ ಹೆಗ್ಗೋಡು ರಸ್ತೆಯ ವಿಜಯನಗರ ನಿವಾಸಿ ಪ್ರಶಾಂತ್ ಟಿ.ಎಸ್ ಎಂಬಾತ ಗೋಕರ್ಣದಲ್ಲಿ ಸತೀಶ್ ಎಂಬುವವರಿಂದ ಬೈಕ್ ಖರೀದಿಸಿದ್ದ. ನಿಮ್ಮ ಹೊಂಡಾ ಡಿಯೋಗೆ 75,000₹ ಕೊಡುತ್ತೇನೆಂದು ಹೇಳಿ ಬೈಕ್ ತೆಗೆದುಕೊಂಡು ಹೋದವನು ತಲೆ ಮರೆಸಿಕೊಂಡಿದ್ದ. ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವಿಷಯ ತನಿಖೆಗೆ ಇಳಿದ ಪೊಲೀಸರಿಗೆ ಮತ್ತೊಂದು‌ ವಿಷಯ ಕೂಡಾ ತಿಳಿದುಬಂದಿದೆ. ಈ ಖತರ್ನಾಕ್ ಆಸಾಮಿ ಕರ್ನಾಟಕ ಹೌಸಿಂಗ್ ಬೋರ್ಡ ಅಧಿಕಾರಿ ಮತ್ತು ಇಂಟರ್ನಲ್ ಆಡಿಟಿಂಗ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಈ ಕಿಲಾಡಿಯನ್ನು ಗೋಕರ್ಣದ ಪಿ.ಎಸ್.ಐ ನವೀನ್ ನಾಯ್ಕ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.ತನಿಖೆ ಕೈಗೊಂಡ ಠಾಣೆಯ ಪಿ.ಎಸ್.ಐ ನವೀನ್ ನೇತ್ರತ್ವದ ತಂಡ ಹಲವು ವಂಚನೆಯಲ್ಲಿ ಭಾಗಿಯಾಗಿದ್ದ ಈತನನ್ನು ಬಂಧಿಸಿ ,ನ್ಯಾಯಾಲಯಕ್ಕೆ ಒಪ್ಪಿಸಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಗೋಕರ್ಣ

Exit mobile version