Follow Us On

WhatsApp Group
Important
Trending

ಗೋಕರ್ಣದಲ್ಲಿ ಶಿವರಾತ್ರಿಯಂದು ಸಮುದ್ರಸ್ನಾನಕ್ಕಿಳಿದು ಕೊಚ್ಚಿಹೋಗುತ್ತಿದ್ದ ಒಟ್ಟು ಆರು ಪ್ರವಾಸಿಗರ ರಕ್ಷಣೆ

ಗೋಕರ್ಣದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮಹಾಶಿವರಾತ್ರಿಯಂದು ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಒಟ್ಟು ಆರು ಮಂದಿಯನ್ನು ರಕ್ಷಿಸಲಾಗಿದೆ.

ಗೋಕರ್ಣ: ಶಿವರಾತ್ರಿ ಸಮುದ್ರಸ್ನಾನಕ್ಕೆ ಇಳಿದು ಅಲೆಗೆ ಕೊಚ್ಚಿ ಹೋಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಇಂದು ನಡೆದಿದೆ.

ಮಹಾರಾಷ್ಟ್ರದಿಂದ ಶಿವರಾತ್ರಿ ನಿಮಿತ್ತ ಗೋಕರ್ಣಕ್ಕೆ  ಆಗಮಿಸಿದ್ದ 15 ಜನ ಪ್ರವಾಸಿಗರು ಶಿವ ದರ್ಶನಕ್ಕೂ ಮೊದಲು ಸಮುದ್ರ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಈಜಾಡುತ್ತಿರುವಾಗ ಅಲೆಗಳಿಗೆ ಸಿಲುಕಿದ ಭೂಪೇಂದ್ರ ಸಿಂಗ್ (48) ಶಿವಸಿಂಗ್ ರಜಪೂತ್ (52), ಯುವರಾಜ್ (45), ಯೋಗೇಂದ್ರ ರಜಪೂತ್ (38) ಕೊಚ್ಚಿಹೋಗುತ್ತಿದ್ದರು.

ತಕ್ಷಣ ಈ ಬಗ್ಗೆ ತಿಳಿದ ಲೈಫ್ ಗಾರ್ಡ್ ಗಳಾದ ರಾಜು ಅಂಬಿಗ, ಮಾರುತಿ ವಿಶ್ವಾಸ್ , ಶೇಖರ್ ಎಂಬುವವರು ನಾಲ್ವರನ್ನು ರಕ್ಷಣೆ ಮಾಡಿದ್ದಾರೆ.

ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಶಿರಸಿಯ ಎಂಟು ಪ್ರವಾಸಿಗರು ಶಿವರಾತ್ರಿ ಪ್ರಯುಕ್ತ ಗೋಕರ್ಣಕ್ಕೆ ಶಿವನ ದರ್ಶನಕ್ಕೆ ಬಂದಿದ್ದು ದರ್ಶನ ಮುಗಿದನಂತರ ಕುಡ್ಲ ಬೀಚಿನಲ್ಲಿ ಈಜಲು ತೆರಳಿದ್ದಾರೆ.

ಇದರಲ್ಲಿ ಇಬ್ಬರು  ಅದರಲ್ಲಿ ಇಬ್ಬರು. ಲೈಫ್ ಗಾರ್ಡ್,    ಸಿಬ್ಬಂದಿಗಳ ಸಲಹೆ ಧಿಕ್ಕರಿಸಿ ಸಮುದ್ರದ ಒಳಕ್ಕೆ ಹೋಗಿ ಸಮುದ್ರದ ಸುಳಿಗೆ ಸಿಲುಕಿದ್ದಾರೆ.ಅದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಮತ್ತು ಮಿಸ್ಟಿಕ್ ಗೋಕರ್ಣ ಅಡ್ವೆಂಚರ್ ಸಿಬ್ಬಂದಿಗಳು ತಕ್ಷಣ ರಕ್ಷಣೆಗೆ ಧಾವಿಸಿ ಇಬ್ಬರಯ ಪ್ರವಾಸಿಗರ ಜೀವ ರಕ್ಷಣೆ ಮಾಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಗೋಕರ್ಣ

Back to top button