ತಂದೆಯ ಶವಸಂಸ್ಕಾರಕ್ಕೆ ಹೂವು ತರಲು ಬರುತ್ತಿದ್ದ ಮಗ ಸಾವು: ಮನೆಯಲ್ಲಿ ಸ್ಮಶಾನ ಮೌನ

ತಂದೆ ಸಾವನ್ನಪ್ಪಿ ಕೆಲ ತಾಸುಗಳು ಕಳೆದಿತ್ತು. ಮನೆಯಲ್ಲಿ ಎಲ್ಲರೂ ದು;ಖದಲ್ಲಿದ್ದರು. ಮಗ ತನ್ನ ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಲು ಹೂವು ತರುವುದಕ್ಕಾಗಿ ಮಾರುಕಟ್ಟೆಗೆ ಹೊರಟುಬಂದಿದ್ದ. ಆದರೆ, ಈ ವೇಳೆ ನಡೆಯಬಾರದ ಘಟನೆ ನಡೆದು ಹೋಗಿದೆ.

ಶಿರಸಿ: ದ್ವಿಚಕ್ರ ವಾಹನ ಮತ್ತು ಸಾರಿಗೆ ಸಂಸ್ಥೆಯ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಲ್ಲಿನ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ. ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತಪಟ್ಟ ದುರ್ದೈವಿಗಳು. ರವಿಚಂದ್ರ ತಂದೆ ಬೆಳಗಿನ ಜಾವ ಮೃತಪಟ್ಟಿದ್ದರು. ಹೀಗಾಗಿ ಮಗ ತಂದೆಯ ಶವಸಂಸ್ಕಾರಕ್ಕೆ ಹೂ ತರಲು ಬರುತ್ತಿದ್ದ. ಈ ವೇಳೆ ಅಪಘಾತವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಹೌದು, ರವಿಚಂದ್ರ ತನ್ನ ತಂದೆಯ ಅಂತ್ಯಸoಸ್ಕಾರಕ್ಕಾಗಿ ಹೂವು ತರಲು ಮಾರುಕಟ್ಟೆಗೆ ಬರುತ್ತಿದ್ದ. ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲೇ ಬೈಕ್ ನಲ್ಲಿ ಇದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಒಂದು ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಈಗ ಮಗನೂ ಸಾವನ್ನಪ್ಪಿರುವುದು ಕುಟುಂಬದ ಸದಸ್ಯರು ಅಕ್ಷರಶ: ಕುಸಿದುಹೋಗಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ರವಿ ನಾಯ್ಕ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಶಿರಸಿ

Exit mobile version