ಮದುವೆಗೆ ತೆರಳಿದ್ದ ವೇಳೆ ಮನೆಯ ಹಿಂಬಂದಿ ಬಾಗಿಲು ಮುರಿದು ಕನ್ನಹಾಕಿದ ಕಳ್ಳರು: ಚಿನ್ನಾಭರಣ ದೋಚಿ ಪರಾರಿ

ಸಿದ್ದಾಪುರ: ಮನೆಯಲ್ಲಿ ಯಾರು ಇಲ್ಲದ ವೇಳೆ ಹಿಂಬದಿಯ ಬಾಗಿಲನ್ನು ಒಡೆದು ಒಳಗೆ ತೆರಳಿ ಕಳ್ಳತನ ಮಾಡಿರುವ ಘಟನೆ ಸಿದ್ದಾಪುರದ ಹಾಳದಕಟ್ಟಾದಲ್ಲಿ ನಡೆದಿದೆ. ಈ ವೇಳೆ ದುಷ್ಕರ್ಮಿಗಳು ಮನೆಯ ಕಪಾಟಿನಲ್ಲಿದ್ದ ಎರಡು ಬಂಗಾರದ ಸರ, ಮೂರು ಜೊತೆ ಜುಮುಕಿ, ಎಂಟು ಉಂಗುರ, ಬ್ರಾಸ್ ಲೆಟ್, ಬೆಳ್ಳಿಯ ಕಾಲುಗೆಜ್ಜೆ ಸೇರಿ ಸಮಾರು 4,87 ಲಕ್ಷದ ಆಭರಣವನ್ನು ದೋಚಿದ್ದಾರೆ. 10 ಸಾವಿರ ರೂಪಾಯಿ ನಗದನ್ನು ಕೂಡಾ ಕದ್ದು ಪರಾರಿಯಾಗಿದ್ದಾರೆ.

ಮನೆಯ ಮಂದಿಯೆಲ್ಲಾ ಬೆಳಿಗ್ಗೆ ಸಂಬಂಧಿಕರ ಮದುವೆಯ ಕಾರ್ಯಕ್ರಮಕ್ಕೆ ಮುರುಡೇಶ್ವರಕ್ಕೆ ತೆರಳಿದ್ದರು. ಇದೇ ಸಮಯವನ್ನು ಉಪಯೋಗಿಸಿಕೊಂಡ ದುಷ್ಕರ್ಮಿಗಳು, ಕಳ್ಳತನ ಮಾಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿದ ಪೊಲೀಸರು, ಚಾಲಾಕಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version