Big News
Trending

ಖಾರದಪುಡಿ, ದೊಣ್ಣೆ, ನೈಲಾನ್ ಹಗ್ಗ ಹಿಡಿದು ಹೆದ್ದಾರಿಯಲ್ಲಿ ದರೋಡೆಗೆ ನಿಂತಿದ್ದರು: ದುಷ್ಕರ್ಮಿಗಳ ಖತರ್ನಾಕ್ ಯೋಜನೆ ಪ್ಲಾಪ್

ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ವಾಹನ ತಡೆದು ದರೋಡೆಗೆ ಸಂಚು ರೂಪಿಸಿದ್ದರು. ಇವರು ದರೋಡೆ ಮಾತ್ರವಲ್ಲ, ಜಾತ್ರೆ ಸಂತೆಯಂತಹ ಜನಸಂದಣಿ ಪ್ರದೇಶದಲ್ಲಿ ಮೊಬೈಲ್ ಸಹ ಕಳ್ಳತನ ಮಾಡುತ್ತುದ್ದರು ಎಂದು ತಿಳಿದುಬಂದಿದೆ.

ಕಾರವಾರ: ಹೆದ್ದಾರಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಪ್ರಯಾಣಿಕರನ್ನು ಹೆದರಿಸಿ, ಅವರಿಂದ ಹಣ ದರೋಡೆ ಮಾಡುವ ಕಳ್ಳರ ಜಾಲವನ್ನು ಕಾರವಾರ ಪೊಲೀಸರು ಬೇಧಿಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಇನ್ನು ಆರು ಜನರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಾಹನದಲ್ಲಿ ಓಡಾಡುವ ಜನರ ಬಳಿಯಿರುವ ಹಣ, ಬಂಗಾರದ ಆಭರಣಗಳು ಹಾಗು ಮೊಬೈಲ್ ಗಳನ್ನು ದರೋಡೆ ಮಾಡುವುದೇ ಇವರ ಕಾಯಕವಾಗಿತ್ತು. ಹೌದು, ತಾಲೂಕಿನ ಹಲವೆಡೆ ಹೆದ್ದಾರಿಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಹೆದರಿಸಿ, ದರೋಡೆ ಮಾಡುತ್ತಿದ್ದವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಳಿಯೂರ ನಿವಾಸಿ ಆಸಿಫ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಸೇರಿದಂತೆ ಏಳು ಜನರ ತಂಡ ವನ್ನು ರಚಿಸಿಕೊಂಡು ಕಾರಿನಲ್ಲಿ ಶಿಕಾರಿಪುರದಿಂದ ಕಾರವಾರಕ್ಕೆ ಬಂದಿದ್ದ. ಬಳಿಕ ಕಾರವಾರ ಹಾಗು ಗೋವಾ ಕಡೆಗಳಲ್ಲಿ ರಾತ್ರಿ ವೇಳೆ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ವಾಹನ ತಡೆದು ದರೋಡೆಗೆ ಸಂಚು ರೂಪಿಸಿದ್ದರು. ಇವರು ದರೋಡೆ ಮಾತ್ರವಲ್ಲ, ಜಾತ್ರೆ ಸಂತೆಯಂತಹ ಜನಸಂದಣಿ ಪ್ರದೇಶದಲ್ಲಿ ಮೊಬೈಲ್ ಸಹ ಕಳ್ಳತನ ಮಾಡುತ್ತುದ್ದರು ಎಂದು ತಿಳಿದುಬಂದಿದೆ.

ಶಿಕಾರಿಪುರದಿಂದ ಕಾರವಾರಕ್ಕೆ ಬಂದಿದ್ದ ತಂಡ ಕಾರವಾರದ ಬೈತಖೋಲ್ ನ ಸಿದ್ದರಾಮೇಶ್ವರ ಮಠದ ಬಳಿಕ ಹೆದ್ದಾರಿಯಲ್ಲಿ ದರೋಡೆ ಮಾಡಲು ನಿಂತಿದ್ದರು. ತಮ್ಮ ಬಳಿ ಖಾರದಪುಡಿ, ದೊಣ್ಣೆ, ನೈಲಾನ್ ಹಗ್ಗ ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ಹಿಡಿದಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಇನ್ನುಳಿದ ಆರು ಮಂದಿ ಪರಾರಿಯಾಗಿದ್ದಾರೆ.

ಇತ್ತಿಚೆಗೆ ವಾರದ ಸಂತೆ, ಜಾತ್ರೆಗಳಲ್ಲಿ ಮೊಬೈಲ್ ಕಳ್ಳತನ ಹೆಚ್ಚಿತ್ತು. ಕಳೆದೆರಡು ದಿನಗಳ ಹಿಂದೆ ಹೊನ್ನಾವರದಲ್ಲಿ ನಡೆದ ಸಂತೆಯಲ್ಲಿ ಕಳ್ಳರು 9 ಮೊಬೈಲ್ ಫೋನ್ ಗಳನ್ನು ಎಗರಿಸಿದ್ದರು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿತ್ತು. ಹೀಗಾಗಿ ಪೊಲೀಸರು ಇದರ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಈಗ ಪೊಲೀಸರ ಈ ಕಾರ್ಯಾಚರಣೆಯಿಂದ ದರೋಡೆಕೋರರು ಮತ್ತು ಮೊಬೈಲ್ ಕಳ್ಳರ ಜಾಲ ಪತ್ತೆಯಾದಂತಾಗಿದೆ. ಹೆಚ್ಚಿನ ತನಿಖೆ ಆರಂಭಿಸಿದ ಪೊಲೀಸರು ಉಳಿದ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಕಾರವಾರ

Back to top button