Follow Us On

WhatsApp Group
ಮಾಹಿತಿ
Trending

ಸಂಸದ ಅನಂತ್‌ಕುಮಾರ್ ವಿರುದ್ದ ಅವಹೇಳನಕಾರಿ ಹೇಳಿಕೆ: ಅಭಿಮಾನಿಯಿಂದ ಆನಂದ್ ಅಸ್ನೋಟಿಕರ್ ವಿರುದ್ಧ ಪೊಲೀಸರಿಗೆ ದೂರು

ಕಾರವಾರ: ಉತ್ತರಕನ್ನಡ ಸಂಸದ, ಕೇಂದ್ರದ ಮಾಜಿ ಸಚಿವರ ಅನಂತಕುಮಾರ ಹೆಗಡೆ ವಿರುದ್ಧ ಅವಹೇಳನವಾಗಿ, ಕೀಳುಮಟ್ಟದ ಪದಗಳಿಂದ ನಿಂದಿಸಿ, ಮಾತನಾಡಿರುವ ಜೆಡಿಎಸ್ ಮುಖಂಡ ಆನಂದ ಅಸ್ನೋಟಿಕರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಂಡ್ಯದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಅಭಿಮಾನಿ ಅನಿಲ್ ಗೌಡ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿಸುಬಂದಿದೆ.

ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಸಂಸದ ಅನಂತಕುಮಾರ ಬಗ್ಗೆ ಅವಹೇಳನಕಾರಿಯಾಗಿ, ಒಂದು (ಮುಸ್ಲಿಂ) ವರ್ಗದ ಜನರನ್ನು ಪ್ರಚೋದನೆ ಉಂಟು ಮಾಡುವಂತೆ ಹೇಳಿಕೆ ನೀಡಿದ್ದಾರೆ. ಇದು ಸಂಸದರಿಗೆ ಮತ ನೀಡಿದವರಿಗೆ ಮತ್ತು ರಾಜ್ಯಾದ್ಯಂತ ಇರುವ ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಆನಂದ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅವ್ನು ಸತ್ರೇನು, ಬದುಕಿದ್ರೇನು. ಏನೂ ಲೆಕ್ಕಕ್ಕಿಲ್ಲ. ಹೇಗೋ ಅವ್ನು ಐದು ವರ್ಷ ನಮ್ಮ ದೃಷ್ಟಿಯಲ್ಲೇ ಇರಲ್ಲ. ಹೀಗಾಗಿ ಅವ್ನ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಸಂಸದ ಅನಂತಕುಮಾರ ಹೆಗಡೆಯವರ ಕುರಿತು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದರು. ಕಾರವಾರದಲ್ಲಿ ಸುದ್ದಿಗೋಷ್ಟಿಯಲ್ಲಿ ಅಸ್ನೋಟಿಕರ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button