Follow Us On

WhatsApp Group
ಮಾಹಿತಿ
Trending

ಸ್ಕೊಡ್‌ವೆಸ್ ನಿಂದ ಮಹತ್ವದ ದಾಖಲೆ ಕಳವು : FIR ದಾಖಲು ಅನಧಿಕೃತ ಯೂಜರ್ ನೇಮ್, ಪಾಸವರ್ಡ ಬಳಸಿ ಸ್ಕೊಡ್‌ವೆಸ್ ಸಂಸ್ಥೆಯ ದಾಖಲೆ ಕಳವು

ಶಿರಸಿ : ಕೆಲವು ದಿನಗಳಿಂದ ಯಾರೋ ವ್ಯಕ್ತಿಗಳು ಇಲ್ಲಿನ ಸ್ಕೊಡ್‌ವೆಸ್ ಕೇಂದ್ರ ಕಛೇರಿಗೆ ಸಂಬAಧಿಸಿದ ಇ-ಮೇಲ್ ಯೂಜರ್‌ನೇಮ್ ಮತ್ತು ಪಾಸವರ್ಡ ಬಳಸಿ ಮಹತ್ವದ ದಾಖಲೆ ಹಾಗೂ ಮಾಹಿತಿಗಳನ್ನು ಕದ್ದಿರುವ ಬಗ್ಗೆ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ it act 2008 ( U/S-66)) ಪ್ರಕಾರ ಎಫ್.ಆಯ್.ಆರ್ ದಾಖಲಿಸಲಾಗಿದೆ.

ಸ್ಕೊಡ್‌ವೆಸ್ ಸಂಸ್ಥೆಯು ಹಲವಾರು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯದಲ್ಲಿ ತೊಡಗಿದ್ದು ಸರಕಾರಕ್ಕೆ ಸಂಬoಧಿಸಿದ ಎಲ್ಲ ಪತ್ರ ವ್ಯವಹಾರಗಳನ್ನು ಇ-ಮೇಲ್ ಮೂಲಕವೇ ನಡೆಸುತ್ತಾ ಬಂದಿರುತ್ತದೆ. ಸಂಸ್ಥೆಯ ಹಣಕಾಸು ವ್ಯವಹಾರಗಳು, ಯೋಜನಾ ಅನುಷ್ಠಾನ ಕಾರ್ಯಗಳು ಹಾಗೂ ಆಡಳಿತಾತ್ಮಕ ಪತ್ರ ವ್ಯವಹಾರಗಳು ಇ-ಮೇಲ್ ಮೂಲಕವೇ ನಡೆಸಲಾಗುತ್ತದೆ. ಈ ಎಲ್ಲಾ ವ್ಯವಹಾರಗಳನ್ನು ಸಂಸ್ಥೆಯ ಅಧಿಕೃತ ವ್ಯಕ್ತಿಗಳು ಪಡೆದ ಯೂಜರ್‌ನೇಮ್ ಮತ್ತು ಪಾಸವರ್ಡಗಳಿಂದ ಮಾತ್ರ ವ್ಯವಹರಿಸಲು ಸಾಧ್ಯವಿರುತ್ತದೆ. ಹೀಗಿದ್ದರೂ ಯಾರೋ ವ್ಯಕ್ತಿಗಳು ಅನಧಿಕೃತವಾಗಿ ಸಂಸ್ಥೆಯ ಯೂಜರ್‌ನೇಮ್ ಮತ್ತು ಪಾಸವರ್ಡಗಳನ್ನು ಬಳಸಿ ದುರುದ್ದೇಶದ ಕಾರಣದಿಂದ ಅತ್ಯಮೂಲ್ಯ ದಾಖಲೆ ಹಾಗೂ ಮಾಹಿತಿಗಳನ್ನು ಕದಿಯುವಮೂಲಕ ಸ್ಕೋಡವೇಸ್ ಸಂಸ್ಥೆಗೆ ತೊಂದರೆ ಉಂಟುಮಾಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಸ್ಕೊಡ್‌ವೆಸ್ ಸಂಸ್ಥೆ ಮತ್ತು ವಿವಿಧ ಇಲಾಖೆಗೆ ಸಂಬoಧಿಸಿದ ಆಡಳಿತ, ಹಣಕಾಸು ಮತ್ತು ವಿವಿಧ ಯೋಜನೆಗಳಿಗೆ ಸಂಬoಧಿಸಿದ ಅಮೂಲ್ಯ ದಾಖಲೆಗಳನ್ನು ವಿವಿಧ ರೀತಿಯಲ್ಲಿ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳಿರುವುದರಿಂದ ತಕ್ಷಣದಲ್ಲಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಈ ಪ್ರಕರಣವು ಸೈಬರ್ CRIME ವ್ಯಾಪ್ತಿಗೆ ಒಳಪಟ್ಟಿದ್ದು ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಬಹುದಾದ ಗಂಭೀರ ಅಪರಾಧವಾಗಿರುತ್ತದೆ.

ಹಲವು ದಿನಗಳಿಂದ ಕೆಲವು ವ್ಯಕ್ತಿಗಳು ಸ್ಕೊಡ್‌ವೆಸ್ ಸಂಸ್ಥೆಯ ಚಟುವಟಿಕೆಗಳಿಗೆ ವಿವಿಧ ರೀತಿಯ ಮಸಿ ಬಳಿಯುವ, ಅಡ್ಡಿಆತಂಕ ಉಂಟುಮಾಡುವ ಕಾರ್ಯದಲ್ಲಿ ತೊಡಗಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ದುರುದ್ದೇಶದಿಂದ ಕದ್ದ ಸಂಸ್ಥೇಗೆ ಸಂಬoಧಿಸಿದ ಯಾವುದೇ ದಾಖಲೆಗಳು ಅಥವಾ ಮಾಹಿತಿಗಳು ಸಾರ್ವಜನಿಕರಿಗೆ ಲಭ್ಯವಾದಲ್ಲಿ ಅಂತಹ ದಾಖಲೆ ಹಾಗೂ ಮಾಹಿತಿಗಳನ್ನು ತಕ್ಷಣದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ಅಥವಾ ಸ್ಕೊಡ್‌ವೆಸ್ ಸಂಸ್ಥೆಗೆ ತಲುಪಿಸುವಂತೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಮನವಿ ಮಾಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶಿರಸಿ

Back to top button