Follow Us On

WhatsApp Group
Uttara Kannada
Trending

ಪರೀಕ್ಷೆ ರದ್ದಾಗಿರುವುದಕ್ಕೆ ಬೇಸರ: ಸಾವಿಗೆ ಶರಣಾದ ವಿದ್ಯಾರ್ಥಿನಿ

ಶಿರಸಿ: ಹೆಚ್ಚುತ್ತಿರುವ ಕೋವಿಡ್ ಕೇಸ್ ನಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರೀಕ್ಷೆ ರದ್ದತಿಯಿಂದಾಗಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಕಷ್ಟಪಟ್ಟು ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು, ಸಾವಿಗೆ ಶರಣಾದ ಘಟನೆ ಶಿರಸಿಯಲ್ಲಿ ನಡೆದಿದೆ.

ಶಿರಸಿ ತಾಲೂಕಿನ ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಧನ್ಯಾ ಆಚಾರಿ ಇಲ್ಲಿನ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದವಳು. ತಾನು ರ‍್ಯಾಂಕ್ ಬರಬೇಕೆಂದು ವರ್ಷಪೂರ್ತಿ ಕಷ್ಟಪಟ್ಟು ಓದಿದ್ದಳು. ಆದರೆ, ಪರೀಕ್ಷೆ ರದ್ದಾದ ಹಿನ್ನಲೆ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾಳೆ ಎನ್ನಲಾಗಿದೆ..

ವಿಸ್ಮಯ ನ್ಯೂಸ್, ಶಿರಸಿ

Back to top button